ಮೈಸೂರು:ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆ ಆರಂಭಗೊಂಡಿದ್ದು, ನವೆಂಬರ್​ 1ರಂದು ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ಜೆಡಿಎಸ್​ “ಪಂಚರತ್ನ” ರಥಯಾತ್ರೆ ಆರಂಭಗೊಳ್ಳಲಿದೆ ಎಂದು ಘೋಷಿಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಈ ಮೊದಲು ಮೈಸೂರಿನ ಚಾಮುಂಡಿಬೆಟ್ಟದಿಂದ ರಥಯಾತ್ರೆ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, 1994ರ ಚುನಾವಣೆಯಲ್ಲಿ ಮುಳಬಾಗಿಲಿನಿಂದ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪ್ರಚಾರ ಆರಂಭಿಸಿ ಸ್ಪಷ್ಟ ಬಹುಮತದೊಂದಿಗೆ ಗದ್ದುಗೆ ಏರಿದ್ದರು. ಹಾಗಾಗಿ, ಅಲ್ಲಿಂದಲೇ ಆರಂಭಿಸಬೇಕು ಎಂದು ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಇನ್ನಿತರ ಹಿರಿಯರ ಅಭಿಲಾಷೆಯಂತೆ ಸ್ಥಳ ಬದಲಾಯಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮುಳಬಾಗಿಲಿನಲ್ಲಿ ಆಂಜನೇಯ ಮತ್ತು ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಡಿಸೆಂಬರ್​ 6ರವರೆಗೆ ಒಟ್ಟು 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ಸಂಚರಿಸಲಿದೆ. ಪ್ರತಿ ತಾಲೂಕಿನಲ್ಲಿ ಆರು ಸಣ್ಣ ಸಭೆ, ಮೂರು ಸಾರ್ವಜನಿಕ ಸಭೆ ನಡೆಸುವುದಲ್ಲದೇ ಸಾರ್ವಜನಿಕರು, ರೈತರೊಂದಿಗೆ ಮಾತುಕತೆ ನಡೆಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಹೂಡಲಾಗುವುದು ಎಂದರು.
ಎರಡನೇ ಹಂತದ ರಥಯಾತ್ರೆ ಮೈಸೂರಿನಿಂದ ಆರಂಭಿಸಲಿದ್ದು, ದಿನಾಂಕವನ್ನು ಬಳಿಕ ನಿರ್ಧರಿಸಲಾಗುವುದು. ಒಟ್ಟು ನಾಲ್ಕು ಹಂತದ ರಥಯಾತ್ರೆ ಹಮ್ಮಿಕೊಂಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಾಗುವುದು. ಮಿಷನ್-123 ಗುರಿಯನ್ನು ಈ ಬಾರಿ ತಲುಪಲಿದೆ. ಜೆಡಿಎಸ್​ಗೆ 15ರಿಂದ 30 ಸ್ಥಾನ ಬರುತ್ತದೆ ಎಂದು ಕುಹಕವಾಡುವವರಿಗೆ ಪ್ರತ್ಯುತ್ತರ ನೀಡಲಾಗುವುದು ಎಂದರು.
ಪಂಚರತ್ನ ಎಂದರೆ?:ಪಂಚರತ್ನ ಎಂದರೆ ಅದು ಕೇವಲ ಘೋಷಣೆ ಅಲ್ಲ. ಎಲ್ಲರಿಗೂ ಉಚಿತ ಶಿಕ್ಷಣ, ಆರೋಗ್ಯ, ವಿದ್ಯುತ್​, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ, ಪ್ರತಿ ಕುಟುಂಬಕ್ಕೆ ಯಾವುದಾದರೊಂದು ಉದ್ಯೋಗ, ಸ್ವಂತ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕ ಬಲವನ್ನು ತುಂಬುವುದು, ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ಇದರ ಉದ್ದೇಶ. ಈ ಬಗ್ಗೆ ನೀಲನಕ್ಷೆಯೂ ಸಿದ್ಧವಾಗಿದೆ ಎಂದು ಹೇಳಿದರು.
ನವೆಂಬರ್​ನಲ್ಲಿ ಘೋಷಣೆ:ರಾಜ್ಯದ 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಈಗಾಗಲೇ 126 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ನವೆಂಬರ್​ 1ರಂದು 106 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಹಿರಂಗ ಪಡಿಸಲಾಗುವುದು. ಇದರಿಂದ ಚುನಾವಣೆ ಸಿದ್ಧತೆಗೆ ಅಭ್ಯರ್ಥಿಗಳಿಗೆ ಸಮಯಾವಕಾಶ ದೊರೆಯಲಿದೆ ಎಂದು ಎಚ್​ಡಿಕೆ ತಿಳಿಸಿದರು.
ಮಿಷನ್​-123ಗೆ ಮುನ್ನುಡಿಯಾಗಿ ರಾಮನಗರದ ಕೇತಗಾನಹಳ್ಳಿಯ ನಮ್ಮ ತೋಟದಲ್ಲಿ 1 ವಾರ ತರಬೇತಿ ಕಾರ್ಯಾಗಾರ ನಡೆಸಲಾಗಿದೆ. ಅದರ ಮುಂದುವರಿದ ಎರಡನೇ ಭಾಗವಾಗಿ ಮೈಸೂರಿನಲ್ಲಿ ಎರಡು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ. ಇಲ್ಲಿ ಅಭ್ಯರ್ಥಿಗಳಿಗೆ ನೀಡಿರುವ ಕೆಲಸಗಳು ಪೂರ್ಣಗೊಂಡಿವೆಯೇ ಎನ್ನುವುದನ್ನು ಪರಿಶೀಲಿಸಲಾಗುವುದು ಎಂದರು.
ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

ಖರ್ಗೆ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ನಾಯಕರ ಜಂಟಿ ಸುದ್ದಿಗೋಷ್ಠಿ: ಸೋನಿಯಾಗೆ ಅಭಿನಂದನೆ, ಬಿಜೆಪಿಗೆ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 18 =
Remember me
