ಬೆಂಗಳೂರು:ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಹಿಜಾಬ್​ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು. ಇದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣದ ದಾಖಲೆ ಹಾಗೂ ಕಡತಗಳನ್ನು ಶೀಘ್ರವೇ ವರ್ಗಾಯಿಸಿ ಎಂದು ರಿಜಿಸ್ಟ್ರಿಗೆ ಸೂಚಿಸಿತು. ವಿಸ್ತೃತ ಪೀಠ ರಚನೆ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸಲಿ ಎಂದರು.
ಈ ಪ್ರಕರಣ ಸಂಬಂಧ ನಿನ್ನೆ(ಮಂಗಳವಾರ) 4 ತಾಸಿಗೂ ಅಧಿಕ ಸಮಯ ಹೈಕೋರ್ಟ್ ವಾದ ಆಲಿಸಿತ್ತು. ಇಂದು ಅರ್ಜಿ ವಿಚಾರಣೆ ವೇಳೆ ಪ್ರಕರಣದ ಸೂಕ್ಷ್ಮತೆ ಗಮನಿಸಿ ವಿಸ್ತೃತ ಪೀಠಕ್ಕೆ ವಹಿಸುವ ಬಗ್ಗೆ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರು ಅರ್ಜಿದಾರರು ಮತ್ತು ಪ್ರತಿವಾದಿಗಳ ಅಭಿಪ್ರಾಯ ಕೇಳಿದರು. ಇದಕ್ಕೆ ಎರಡೂ ಕಡೆಯಿಂದಲೂ ಸಮ್ಮತಿ ಸಿಕ್ಕಿದೆ.
ಸರ್ಕಾರದ ವಾದಕ್ಕೆ ಧ್ವನಿಗೂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ಯಾವುದೇ ಕಾರಣಕ್ಕೂ ಮಧ್ಯಂತರ ಆದೇಶ ನೀಡಬಾರದು. ಸಮವಸ್ತ್ರದ ಬಗ್ಗೆ ನಿಯಮ ರೂಪಿಸಲಾಗಿದೆ. ಪ್ರತಿ ವರ್ಷವೂ ಕಾಲೇಜಿನಲ್ಲಿ ಸಮವಸ್ತ್ರ ಇರುತ್ತದೆ. ಪ್ರತಿಯೊಬ್ಬರೊಂದಿಗೂ ಚರ್ಚಿಸಿಯೇ ಸಮವಸ್ತ್ರ ರೂಪಿಸಲಾಗಿದೆ. ಇಷ್ಟು ದಿನ ಆ ಸಮವಸ್ತ್ರವನ್ನು ಅರ್ಜಿದಾರರೂ ಧರಿಸಿದ್ದಾರೆ. ಈಗ ಏಕಾಏಕಿ ತಕರಾರು ತೆಗೆದಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಆದೇಶ ನೀಡಬಾರದು ಎಂದರು.
ಸರ್ಕಾರ ಅರ್ಜಿದಾರರ ಹಕ್ಕುಗಳನ್ನು ನಿಯಂತ್ರಿಸುವಂಥ ಆದೇಶ ಹೊರಡಿಸಿಲ್ಲ ಎನ್ನುತ್ತಿದೆ. ಹಾಗಿದ್ದರೆ ಅರ್ಜಿದಾರರಿಗೆ ಕಾಲೇಜುಗಳಿಗೆ ತೆರಳಲು ಯಾವುದೇ ನಿರ್ಬಂಧ ವಿಧಿಸಬಾರದು ಎಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಹೇಳಿದರು. ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸುವರೆಗೆ ಮಧ್ಯಂತರ ಆದೇಶ ನೀಡಿ. ಕಾಲೇಜಿಗೆ ಪ್ರವೇಶ ಕಲ್ಪಿಸಲು ಮಧ್ಯಂತರ ಆದೇಶ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ವಾದ-ವಿವಾದ ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದರು.
‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ

ಕೆಪಿಎಸ್ಸಿ 2011ರ ಬ್ಯಾಚ್​ನ ಗೆಜೆಟೆಡ್​​ ಪ್ರೊಬೆಷನರಿಗಳ ನೇಮಕಕ್ಕೆ ಅಸ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
