ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಗಾದಿ ಬಿಜೆಪಿಗೆ ಒಲಿದಿದೆ. ಈರೇಶ ಅಂಚಟಗೇರಿ ಮೇಯರ್​ ಸ್ಥಾನ ಅಲಂಕರಿಸಿದರೆ, ಉಪ‌ ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಆಯ್ಕೆಯಾದರು.
ಶನಿವಾರ ಬೆಳಗ್ಗೆ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​ನಿಂದ ಮಯೂರ ಮೋರೆ, ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದರು. ಇತ್ತ ಬಿಜೆಪಿ ಅಭ್ಯರ್ಥಿಗಳಾಗಿ ಈರೇಶ ಅಂಚಟಗೇರಿ ಮತ್ತು ಉಮಾ ಮುಕುಂದ ಅಖಾಡಕ್ಕಿಳಿದಿದ್ದರು. ಎಐಎಂಐಎಂ ನಿಂದ ಮೇಯರ್ ಸ್ಥಾನಕ್ಕೆ ನಜೀರ್ ಹೊನ್ಯಾಳ ಹಾಗೂ ಉಪ‌ ಮೇಯರ್ ಸ್ಥಾನಕ್ಕೆ ವಹೀದಾ ಕಿತ್ತೂರು ಸ್ಪರ್ಧಿಸಿದ್ದರು.
ಮೇಯರ್-ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಗಳು ತಲಾ 50 ಹಾಗೂ 51 ಮತಗಳನ್ನು ಪಡೆದರು. ಕಾಂಗ್ರೆಸ್​ನಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಯೂರ ಮೋರೆ 35 ಮತ ಪಡೆದರೆ, ಉಪ‌ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ದೀಪಾ ನೀರಲಕಟ್ಟಿ 35 ಮತ ಗಳಿಸಿದರು. ಪಾಲಿಕೆಯ ಒಟ್ಟು 82 ಸದಸ್ಯರು ಹಾಗೂ 7 ಜನಪ್ರತಿನಿಧಿಗಳು ಮತಾಧಿಕಾರ ಹೊಂದಿದ್ದರು.
ಧಾರವಾಡದ ವಾರ್ಡ್ ನಂ.4ರಿಂದ ಎರಡು ಬಾರಿ ಪಾಲಿಕೆ ಸದಸ್ಯರಾಗಿ ಈರೇಶ ಅಂಚಿಟಗೇರಿ ಆಯ್ಕೆ ಆಗಿದ್ದಾರೆ. ಹುಬ್ಬಳ್ಳಿಯ ವಾರ್ಡ್ ನಂ.44ರಿಂದ ಮೊದಲ ಬಾರಿಗೆ ಪಾಲಿಕೆ ಸದಸ್ಯೆ ಆಗಿ ಆಯ್ಕೆಯಾದ ಉಮಾ ಮುಕುಂದಗೆ ಉಪಮೇಯರ್​ ಪಟ್ಟ ಒಲಿದಿದೆ. ಬೆಳಗಾವಿ ‌ಪ್ರಾದೇಶಿಕ‌ ಆಯುಕ್ತ ಆಮ್ಲಾನ್ ಬಿಸ್ವಾಸ್ ಚುನಾವಣಾ ಅಧಿಕಾರಿಯಾಗಿದ್ದರು.
ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ದೇವೇಗೌಡರ ಜತೆ ತೆಲಂಗಾಣ ಸಿಎಂ ಮಾತುಕತೆ: 3 ತಿಂಗಳು ಕಾದು ನೋಡಿ, ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
