ಹುಬ್ಬಳ್ಳಿ:ಲವ್​ ಜಿಹಾದ್​ ಮೂಲಕ ಹಿಂದು ಸಮಾಜದ ಯುವತಿಯನ್ನು ಮೋಡಿ ಮಾಡಿ, ಮುಸ್ಲಿಂ ಯುವಕ ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಯುವತಿಯ ಕುಟುಂಬದವರು ಹಾಗೂ ಹಿಂದು ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಉಪನಗರ ಪೊಲೀಸ್​ ಠಾಣೆ ಎದುರು ಬುಧವಾರ ದಿಢೀರ್​ ಪ್ರತಿಭಟನೆ ನಡೆಸಿದ್ದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ.‘ನನ್ನನ್ನು ಯಾರೂ ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ. ನಾನೇ ಪ್ರೀತಿಯಿಂದ ಪ್ರಿಯಕರನ ಜತೆ ಬಂದಿದ್ದೇನೆ’ ಎಂದು ವಿಡಿಯೋ ಹೇಳಿಕೆ ಕಳಿಸಿದ್ದಾಳೆ. ಬಲವಂತವಾಗಿ ನನ್ನ ಮಗಳಿಂದ ಹೇಳಿಕೆ ನೀಡಿಸಿ ವಿಡಿಯೋ ಮಾಡಿ ಕಳಿಸಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ಕೇಶ್ವಾಪುರ ನಿವಾಸಿ ಇಬ್ರಾಹಿಂ ಸೈಯದ್​ ಎಂಬಾತ ಉಣಕಲ್​ ನಿವಾಸಿ ಸ್ನೇಹಾ ಡಮಾಮರ ಎಂಬ ಯುವತಿಯನ್ನು ಪುಸಲಾಯಿಸಿ, ಯುಗಾದಿ ಹಬ್ಬದಂದೇ ಕರೆದುಕೊಂಡು ಹೋಗಿದ್ದಾನೆ. ತನ್ನ ಹೆಸರು ಅರುಣ ಎಂದು ಹೇಳಿ ನಾಟಕವಾಡಿದ್ದಾನೆ. ಆಕೆಯ ಮತಾಂತರಕ್ಕೆ ಹುನ್ನಾರ ನಡೆಸಿದ್ದಾನೆ. ಫೆ.11ರಂದು ಸ್ನೇಹಾ ಮನೆಯಲ್ಲೇ ಇದ್ದಳು. ಅಂದು ಗದಗ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿವಾಹ ನಡೆದಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ. ಇದರಲ್ಲಿ ಕೆಲ ಅಧಿಕಾರಿಗಳ ಕೈವಾಡವಿದೆ ಎಂದು ಪಾಲಕರು ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದರು.
ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಸ್ನೇಹಾಳನ್ನು ಕರೆತರುವಂತೆ ಪ್ರತಿಭಟನಾಕಾರರು ಗಡುವು ನೀಡಿದ್ದರು. ಯುವತಿಯ ಪೋಷಕರ ಆಗ್ರಹಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಕೂಡ ಧ್ವನಿಗೂಡಿಸಿದ್ದರು. ಯುವತಿಯನ್ನು ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಕರೆತರದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಕೊನೆಗೂ ಯುವತಿಯನ್ನು ಕರೆತಂದ ಪೊಲೀಸರು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಮೇಕೆ ಜೊತೆ ಯುವಕನ ಮದ್ವೆ! ಕುಟುಂಬಸ್ಥರ ಸಮ್ಮುಖದಲ್ಲೇ ತಾಳಿ ಕಟ್ಟಿದ… ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಿ

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eighteen =
Remember me
