ಬೆಂಗಳೂರು:ಕೆಆರ್​ಎಸ್ ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಮಟ್ಟ ಹಾಕಬೇಕು ಎಂದು ಸರ್ಕಾರದ ಮೇಲೆ ಒತ್ತಡ ಮುಂದುವರಿಸಿರುವ ಸಂಸದೆ ಸುಮಲತಾ ಅಂಬರೀಶ್ ಶನಿವಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.
ರಾಜಭವನಕ್ಕೆ ಧಾವಿಸಿದ ಸುಮಲತಾ, ನೂತನ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಶುಭಾಶಯ ಕೋರುವ ಜತೆಗೆ ಅಕ್ರಮ ಗಣಿಗಾರಿಕೆ ತಡೆಯಲು ಕೋರಿ ಮನವಿಪತ್ರ ಸಲ್ಲಿಸಿದ್ದಾರೆ. ಈ ಮನವಿಗೆ ಸ್ಪಂದಿಸಿದ ಗೆಹಲೋತ್, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಅಕ್ರಮ ಗಣಿಗಾರಿಕೆಯ ದುಷ್ಪರಿಣಾಮದ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿರುವೆ ಎಂದರು. ದರ್ಶನ್​ ಹೆಸರಲ್ಲಿ ವಂಚನೆ ಯತ್ನ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸುಮಲತಾ, ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ಜಗಳದ ಬಗ್ಗೆ ಗೊತ್ತಿಲ್ಲ. ಅನಾವಶ್ಯಕ ಹೇಳಿಕೆ ಕೊಡುವುದು ಸರಿಯಲ್ಲ, ಆ ಕುರಿತು ಮಾತನಾಡಲು ಇಷ್ಟವಿಲ್ಲ. ಮೈಸೂರು ಹೋಟೆಲ್​ನಲ್ಲಿ ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರ ಸತ್ಯಾಂಶ ಹೊರಬರಲಿದೆ ಎಂದರು.
ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
