ಮೈಸೂರು:ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್​ಸಿಎ) ಮೈಸೂರು ವಲಯ ವತಿಯಿಂದ 19 ವರ್ಷದೊಳಗಿನವರ ಅಂತರ ಜಿಲ್ಲಾ ಟೂರ್ನಿಗೆ ತಂಡದ ಆಯ್ಕೆ ಪ್ರಕ್ರಿಯೆ ಆ.13ರ ಬೆಳಗ್ಗೆ 8:30ಕ್ಕೆ ನಗರದ ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಮೊದಲು ಆ. 14ರಂದು ಆಯ್ಕೆ ನಡೆಸಲು ನಿರ್ಧರಿಸಲಾಗಿತ್ತು. ವಾರಾಂತ್ಯ ಲಾಕ್​ಡೌನ್ ಇರುವುದರಿಂದ ಒಂದು ದಿನ ಮುಂಚಿತವಾಗಿ ಆಯೋಜಿಸಲು ತೀರ್ವನಿಸಲಾಗಿದೆ. ಆಸಕ್ತರು ಆ.12ರ ಸಂಜೆ 5ರೊಳಗೆ ಹೆಸರು ನೋಂದಾಯಿಸಬಹುದು. 2002ರ ಸೆ.1ರ ಬಳಿಕ ಜನಿಸಿದವರು ಪಾಲ್ಗೊಳ್ಳಲು ಅರ್ಹತೆ ಹೊಂದಿದ್ದಾರೆ. 16 ವರ್ಷಕ್ಕಿಂತ ಕೆಳಗಿನವರಿಗೆ ಭಾಗವಹಿಸಲು ಅವಕಾಶವಿಲ್ಲ. ಮಾಹಿತಿಗೆ ದೂ: 0821-2519900 ಸಂಪರ್ಕಿಸಬಹುದು ಎಂದು ಕೆಎಸ್​ಸಿಎ ಮೈಸೂರು ವಲಯ ನಿಯಂತ್ರಕ ಎಸ್.ಸುಧಾಕರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ತಂಡ:19 ವರ್ಷದೊಳಗಿನ ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಆ.14ರಂದು ಬೆಳಗ್ಗೆ 9.30ರಿಂದ ಬೆಂಗಳೂರಿನ ಕೆಎಸ್​ಸಿಎಬಿ ಮೈದಾನದಲ್ಲಿ ಆಯ್ಕೆ ನಡೆಯಲಿದೆ. ಆಸಕ್ತ ಆಟಗಾರ್ತಿಯರು ಅಂದು ಬೆಳಗ್ಗೆ 9ರೊಳಗೆ ಮೈದಾನದಲ್ಲಿ ಹಾಜರಿರಬೇಕು.
2002ರ ಸೆ.1ರ ಬಳಿಕ ಜನಿಸಿದವರು ಪಾಲ್ಗೊಳ್ಳಬಹುದು. ಕೋವಿಡ್ ಲಸಿಕೆ ಪಡೆದವರು ಪ್ರಮಾಣಪತ್ರ ಹಾಜರು ಪಡಿಸಬೇಕು. ಲಸಿಕೆ ಪಡೆಯದವರು ಅಥವಾ 18 ವರ್ಷಕ್ಕಿಂತ ಕೆಳಗಿನವರು 48 ಗಂಟೆಗಳ ಒಳಗಿನ ಆರ್​ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ದೂರದ ಊರುಗಳಿಂದ ಬರುವವರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಎಸ್​ಸಿಎ ಪ್ರಕಟಣೆ ತಿಳಿಸಿದೆ.
ಅಮ್ಮನ ಮಾತು ಕೇಳಿದ್ದರೆ ವಿವೇಕ್​ ಸಾಯುತ್ತಲೇ ಇರಲಿಲ್ಲ..! ಮುಗಿಲುಮುಟ್ಟಿದೆ ಹೆತ್ತವ್ವನ ಆಕ್ರಂದನ

ಪಿಯುಸಿಯಲ್ಲಿ ಶೇ.94 ಅಂಕ ಪಡೆದ ವಿದ್ಯಾರ್ಥಿಯನ್ನು ಕೂಲಿ ಕೆಲಸಕ್ಕಿಳಿಸಿದ ಚಾಮರಾಜನಗರ ಆಕ್ಸಿಜನ್​ ದುರಂತ!

ನನ್ನ ತಾಯಾಣೆ.. ಅಷ್ಟೊಂದು ಹಣವನ್ನು ಜೀವನದಲ್ಲಿ ನೋಡಿಯೇ ಇರಲಿಲ್ಲ: ಮಂಜು ಪಾವಗಡ

ವಾಂತಿ ಮಾಡಲು ಹೋದ ಮಹಿಳೆ ಬಸ್​ನಿಂದ ಬಿದ್ದು ಸಾವು! ಕಗ್ಗತ್ತಲಿನ ಕಾಡಲ್ಲಿ 8 ಕಿ.ಮೀ ದೂರ ಶವ ಹೊತ್ತ ಗ್ರಾಮಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
