ಸಾಗರ:ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಕರುಮನೆ ರಾಮಸ್ವಾಮಿ(57) ಮೃತರು. ಇತ್ತೀಚಿಗೆ ಇವರಲ್ಲಿ ಮಂಗನ ಕಾಯಿಲೆ ಲಕ್ಷಣ ಕಾಣಿಸಿಕೊಂಡಿತ್ತು. ಏ.24ರಂದು ರಕ್ತ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿತ್ತು. ತಕ್ಷಣ ಮಣಿಪಾಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಜ್ವರ ಉಲ್ಬಣಗೊಂಡಿದ್ದು, ಅಂಗಾಂಗ ವೈಫಲ್ಯವಾಗಿ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಸಾಗರ ವೈದ್ಯಾಧಿಕಾರಿ ಡಾ. ಮೋಹನ್​ ತಿಳಿಸಿದ್ದಾರೆ.
2019ರಲ್ಲಿ ಶಿವಮೊಗ್ಗ ಜಿಲ್ಲೆಯ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಈ ವರ್ಷ ಜಿಲ್ಲೆಯಲ್ಲಿ ಕೆಎಫ್​ಡಿಗೆ ಇದು ಮೊದಲನೆಯ ಸಾವು. ಮಳೆಯಾದರೆ ಹುಣುಗು ಕೊಚ್ಚಿಕೊಂಡು ಹೋಗಲಿದ್ದು, ಸೋಂಕು ಹರಡುವುದಿಲ್ಲ. ತೀರ್ಥಹಳ್ಳಿ ತಾಲೂಕು ಸೇರಿದಂತೆ ಹಲವೆಡೆ ಈಗಾಗಲೇ ಮಳೆಯಾಗಿದ್ದು, ಇತರ ಕಡೆ ಕೆಎಫ್​ಡಿ ಸೋಂಕು ಕಾಣಿಸಿಕೊಂಡಿಲ್ಲ. ಅರಳಗೋಡು ಭಾಗದಲ್ಲಿ ಇನ್ನೂ ಮಳೆಯಾಗದಿರುವುದರಿಂದ ಹುಣುಗು ಸಮಸ್ಯೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + ten =
Remember me
