ಕೋಲಾರ:ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ (ಯುಎನ್​ಎಚ್​ಆರ್​ಸಿ) ಕೋಲಾರ ಜಿಲ್ಲೆಯ ಡಾ. ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ.
ಕೋಲಾರ ತಾಲೂಕಿನ ಕಸಬಾ ಕುರುಬರಹಳ್ಳಿಯ ವಿ.ಪ್ರಸನ್ನಕುಮಾರ್​ ಮತ್ತು ಜಯಮ್ಮ ಅವರ ಪುತ್ರಿ ಅಶ್ವಿನಿ. ಬೆಂಗಳೂರಿನ ಮೌಂಟ್​ ಕಾರ್ಮೆಲ್​ ಕಾಲೇಜಿನಲ್ಲಿ ಪದವಿ, ಬೆಂಗಳೂರಿನ ಸೇಂಟ್​ ಜೋಸೆಫ್​ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂಪಿಲ್​, ಪಿಎಚ್​ಡಿ ಪದವಿಯನ್ನು ದೆಹಲಿಯ ಜವಹರಲಾಲ್​ ನೆಹರು ವಿಶ್ವವಿದ್ಯಾಲಯ (ಜೆಎನ್​ಯು) ಪಡೆದಿದ್ದಾರೆ.
ಮೌಂಟ್​ ಕಾರ್ಮೆಲ್​ ಕಾಲೇಜಿನಲ್ಲಿ ಕೆಲ ಕಾಲ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದ ಅಶ್ವಿನಿ, ನಂತರ ಆಮ್ನೆಸ್ಟಿ ಇಂಟರ್​ನ್ಯಾಷನಲ್​ ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ಒಡಿಶಾ, ಛತ್ತೀಸ್​ಘಡ ರಾಜ್ಯಗಳ ಆದಿವಾಸಿಗಳ ಪ್ರದೇಶಗಳಲ್ಲಿ ಗಣಿಗಾರಿಕೆಯಿಂದ ಆದಿವಾಸಿಗಳ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ್ದಾರೆ. ನಾಲ್ಕು ವರ್ಷಗಳಿಂದ ಸೇಂಟ್​ ಜೋಸೆಫ್​​ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಇವರು ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ ನೇಮಕವಾಗಿದ್ದಾರೆ. ಜಿನೀವಾ ಮೂಲದ 47 ಸದಸ್ಯರ ವಿಶ್ವಸಂಸ್ಥೆಯ ಮಾನವ ಹಕ್ಕು ಸಂಸ್ಥೆ ಇವರ ನೇಮಕಾತಿ ಅನುಮೋದಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 4 =
Remember me
