ಮಂಗಳೂರು:ಮದರಸಾದಿಂದ ಮನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಬೈಕ್​ನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂಬ ಪ್ರಕರಣದ ಅಸಲಿ ಕತೆ ಬಯಲಾಗಿದೆ.
ಕೃಷ್ಣಾಪುರದಲ್ಲಿ ಜೂ.27ರಂದು ರಾತ್ರಿ 9.30ಕ್ಕೆ ಮದ್ರಸಾದಿಂದ ಮನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಬೈಕ್​ನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಸುರತ್ಕಲ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಸುರತ್ಕಲ್​ ಪೊಲೀಸರು ಬಾಲಕನನ್ನು ವಿಚಾರಣೆ ನಡೆಸಿದಾಗ ಬಾಲಕನಿಗೆ ಓದಿನಲ್ಲಿ ಆಸಕ್ತಿ ಇಲ್ಲದ್ದಕ್ಕೆ ಹಲ್ಲೆಯ ಕತೆ ಕಟ್ಟಿದ್ದ ಎಂಬ ಸತ್ಯಾಂಶ ಹೊರಬಿದ್ದಿದೆ.
ಈ ಬಗ್ಗೆ ನಗರ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್​ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಬಾಲಕನಿಗೆ ಹಲ್ಲೆಗೈಯ್ಯಲಾಗಿದೆ ಎಂಬ ಸುದ್ದಿ ಸುರತ್ಕಲ್​, ಕೃಷ್ಣಾಪುರ, ಚೊಕ್ಕಬೆಟ್ಟು ವ್ಯಾಪ್ತಿಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗಿದ್ದು, ಸನ್ನಿವೇಶ, ಸಾಕ್ಷಿ, ಸಿಸಿ ಕ್ಯಾಮರಾ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಬಾಲಕನನ್ನು ವಿಚಾರಣೆ ನಡೆಸಿದಾಗ ಆತನಿಗೆ ವೈಯಕ್ತಿಕ ಸಮಸ್ಯೆಯಿದ್ದು, ಎಷ್ಟು ಓದಿದರೂ ಅರ್ಥವಾಗುತ್ತಿರಲಿಲ್ಲ. ಶಾಲೆಯಲ್ಲೂ ಸರಿಯಾದ ಸ್ನೇಹಿತರಿರಲಿಲ್ಲ, ಮನೆಯಲ್ಲಿ ಬಡತನ. ಈ ರೀತಿಯ ಗೊಂದಲದಿಂದ ಮಾನಸಿಕವಾಗಿ ನೊಂದ ಬಾಲಕ ತನ್ನದೇ ಪೆನ್​ನಿಂದ ಅಂಗಿಗೆ ತೂತು ಮಾಡಿ ಹಲ್ಲೆಗೈದಿರುವ ಬಗ್ಗೆ ವಿವಾದ ಸೃಷ್ಟಿಸಿದ್ದಾನೆ. ವಿಚಾರಣೆ ವೇಳೆ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಕಮಿಷನರ್​ ತಿಳಿಸಿದ್ದಾರೆ.
ಬಾಲಕನ ಹೇಳಿಕೆ ಬಳಿಕ ಮದರಸಾ ಮುಖಂಡರಿಗೆ ಮತ್ತು ಪಾಲಕರಿಗೆ ಸಮಾಧಾನವಾಗಿದೆ. ಕೆಲವರು ಈ ಘಟನೆಯನ್ನು ಕೋಮು ದ್ವೇಷ ಹಬ್ಬಿಸುವ ರೀತಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ಕಮಿಷನರ್​ ತಿಳಿಸಿದ್ದಾರೆ.
ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
