ಬಳ್ಳಾರಿ:ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ-ಮಗು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬಳ್ಳಾರಿಯಲ್ಲಿ ಬುಧವಾರ ಸಂಭವಿಸಿದೆ. ಇನ್ನೊಂದು ಮಗುವಿನ ಸ್ಥಿತಿ ಗಂಭೀರಾವಗಿದೆ.
ಬಳ್ಳಾರಿ ತಾಲೂಕಿನ ಹೊಸ ಎರೆಗುಡಿ ಗ್ರಾಮದ ವೀರೇಶ, ಇವರ ಪತ್ನಿ ಅಂಜಲಿ ಮತ್ತು ಮಗ ದಿನೇಶ್ ಮೃತ ದುರ್ದೈವಿಗಳು. ಅಂಜಲಿ ಬಿ.ಎಡ್ ಓದುತ್ತಿದ್ದರು. ಇಂದು ಪರೀಕ್ಷೆ ಇತ್ತು. ಹಾಗಾಗಿ ಪತ್ನಿಯನ್ನು ಪರೀಕ್ಷಾ ಕೇಂದ್ರಕ್ಕೆ ಬೈಕ್​ನಲ್ಲಿ ಇಬ್ಬರು ಮಕ್ಕಳೊಂದಿಗೆ ವೀರೇಶ್ ಕರೆದೊಯ್ಯುತ್ತಿದ್ದರು. ವೀರೇಶ್ ಹಾಸ್ಟೆಲ್ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು.
ಮಾರ್ಗಮಧ್ಯೆ ಯಮನಂತೆ ಬಂದ ಲಾರಿ ಹಿಂಬದಿಯಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಡ- ಹೆಂಡತಿ-ಮಗ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹನಿ ಎಂಬ ಹೆಣ್ಣು ಮಗುವಿಗೆ ಸ್ಥಿತಿ ಗಂಭೀರವಾಗಿದೆ. ಬಳ್ಳಾರಿ ಟ್ರಾಮ ಕೇರ್ ಸೆಂಟರ್​ಗೆ ಹನಿಯನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ವಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೂವರ ಶವಗಳನ್ನು ರವಾನಿಸಲಾಗಿದೆ.
ಮೂವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶವಾಗಾರದ ಮುಂದೆ ಎರೆಗುಡಿ ಗ್ರಾಮಸ್ಥರು ಹಾಗೂ ಸಂಬಂಧಿಕರು ಜಮಾಯಿಸಿದ್ದು, ಕ್ರೂರ ವಿಧಿಯನ್ನು ಶಪಿಸುತ್ತಿದ್ದಾರೆ. ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಇನ್ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ ಬೆಂಗಳೂರು-ಮಂಗಳೂರು ಎಕ್ಸ್​ಪ್ರೆಸ್​ ರೈಲು

ದೋಷ ನಿವಾರಣೆ ನೆಪದಲ್ಲಿ ನಕಲಿ ಹೇಯ ಕೃತ್ಯವೆಸಗಿದ ಸ್ವಾಮೀಜಿ-ಪತ್ನಿ! ಐದು ವರ್ಷದಿಂದ ಯುವತಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ

BBMPಯ ಲಕ್ಷಾಂತರ ಹಣ ಪ್ರೇಯಸಿ ಖಾತೆಗೆ ಜಮೆ! ಎಸ್​​ಡಿಎ ಸೇರಿ ಇಬ್ಬರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
