ಬೆಳಗಾವಿ:ತನ್ನನ್ನು ಮದುವೆಯಾಗಲಿಲ್ಲ ಎಂದು ಸಿಟ್ಟಿಗೆದ್ದ ಪ್ರಿಯಕರ, ಯುವತಿಯ ತಲೆ ಕಡಿದು ಅದನ್ನು ಹಿಡಿದುಕೊಂಡೇ ಪೊಲೀಸ್​ ಠಾಣೆಗೆ ಬಂದ ಭೀಕರ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಶುಕ್ರವಾರ ನಡೆದಿತ್ತು. ಈ ಭಯಾನಕ ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಇಂತಹದ್ದೇ ಭೀಕರ ದುರಂತ ಬೆಳಗಾವಿಯಲ್ಲೂ ಸಂಭವಿಸಿದೆ. ಪ್ರೇಯಸಿಯನ್ನು ಕೊಂದವ, ಆಕೆಯ ಮೃತದೇಹದ ಮುಂದೆಯೇ ನೇಣಿಗೆ ಕೊರಳೊಡ್ಡಿದ್ದಾನೆ.
ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ರೇಣುಕಾ ಕೆಂಚಪ್ಪ ಪಂಚಣ್ಣವರ(28) ಕೊಲೆಯಾದವಳು. ಸವದತ್ತಿ ತಾಲೂಕಿನ ರಾಮಚಂದ್ರ ತೆಣಗಿ(26) ಆತ್ಮಹತ್ಯೆಗೆ ಶರಣಾದವ. ರೇಣುಕಾ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ರಾಣಿ‌ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಮಚಂದ್ರ ಎಂಎ ವಿದ್ಯಾಭ್ಯಾಸ ಮಾಡುತ್ತಿದ್ದ. ನಗರದಲ್ಲೇ ರೂಂ ಒಂದರಲ್ಲಿ ಬಾಡಿಗೆಗೆ ನೆಲೆಸಿದ್ದಳು.
ಇವರಿಬ್ಬರೂ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚಿಗೆ ಯಾವುದೋ ವಿಚಾರಕ್ಕೆ ಬೇಸತ್ತ ರೇಣುಕಾ, ರಾಮಚಂದ್ರನಿಂದ ಅಂತರ ಕಾಯ್ದುಕೊಳ್ಳುತ್ತಿದ್ದಳಂತೆ. ಬೇಸತ್ತ ರಾಮಚಂದ್ರ, ಗುರುವಾರ ರಾತ್ರಿ, ಆಕೆಯ ರೂಂಗೆ ಹೋಗಿ ಮಾತುಕತೆ ನಡೆಸಿದ್ದ. ಇದೊಂದು ಕೆಟ್ಟ ಕನಸು ಎಂದು ನನ್ನನ್ನು ಮರೆತು ಬಿಡು ಎಂದು ಆಕೆ ಹೇಳಿದ್ದಳಂತೆ. ಈ ಮಾತು ಕೇಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ರಾಮಚಂದ್ರ, ತಡರಾತ್ರಿ ಉಸಿರುಗಟ್ಟಿಸಿ ಪ್ರೇಯಸಿಯನ್ನು ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಎಪಿಎಂಸಿ ಪೊಲೀಸರು ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ‌.
ವಿಜಯನಗರದಲ್ಲಿ ಭಯಾನಕ ಘಟನೆ:ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಪಾಗಲ್ ಪ್ರೇಮಿ ಭೋಜರಾಜ, ಗುರುವಾರ ಸಂಜೆ ನಿರ್ಮಲಾ (23) ಎಂಬಾಕೆಯ ತಲೆ ಕಡಿದು ಪೊಲೀಸ್​ ಠಾಣೆಗೆ ಅದನ್ನು ತಂದು ಶರಣಾಗಿದ್ದಾನೆ. ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಂಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ. ಇಷ್ಟಲ್ಲಾ ಆದ ಬಳಿಕ ಈತ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದರೂ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓಡಿಕೊಳ್ಳಲು ಊರಿಗೆ ಬಂದಿದ್ದಳು. ಆಗ ಮಚ್ಚಿನಿಂದ ಆಕೆಯ ತಲೆ ಕಡಿದು ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಠಾಣೆಗೆ ರುಂಡದೊಂದಿಗೆ ಬಂದಿದ್ದ. ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ಕಾಮಪುರಾಣ ಲೀಕ್​!

ಇದೆಂಥಾ ಮಾತು ಹೇಳಿದ್ರಿ ಲಕ್ಷ್ಮಣ ಸವದಿ? ಕಾಂಗ್ರೆಸ್ಸಿನ ತಾಯಿ ಬಂಜೆ, ಗರ್ಭಿಣಿಯೂ ಆಗಲ್ಲ, ಕೂಸನ್ನೂ ಹೆರುವುದಿಲ್ಲ…

ಕೂಡ್ಲಿಗಿಯಲ್ಲೊಂದು ಬೆಚ್ಚಿಬೀಳೋ ಘಟನೆ: ಮದುವೆಗೆ ಒಪ್ಪಲಿಲ್ಲವೆಂದು ರುಂಡ ಕಡಿದು ಪೊಲೀಸ್​ ಠಾಣೆಗೆ ತಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
