ತುಮಕೂರು:ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ಪಾಠ ಮಾಡುವ ಬದಲು ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ.
ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಶಾಲೆ ಸಹ ಶಿಕ್ಷಕ ಎಂ.ಸುರೇಶ್, ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆ ಪಡೆದು ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ಕೊಡುತ್ತಿದ್ದ. ಇವನ ವರ್ತನೆಯಿಂದ ಸಿಟ್ಟಿಗೆಟ್ಟ ಗ್ರಾಮಸ್ಥರು ಶಿಕ್ಷಕನಿಗೆ ತಕ್ಕ ಪಾಠ ಕಲಿಸಿದ್ದಾರೆ.
ವಿದ್ಯಾರ್ಥಿಗಳ ವ್ಯಾಸಂಗ ದೃಢೀಕರಣ ಪತ್ರ ಸೇರಿ ಇನ್ನಿತರ ಕಾರಣಗಳಿಗೆ ಶಾಲೆಗೆ ಬರುವ ವಿದ್ಯಾರ್ಥಿಗಳ ಪಾಲಕರೊಂದಿಗೆ ಸಲುಗೆಯಿಂದ ವರ್ತಿಸಿ ಅವರ ಮೊಬೈಲ್​ ಸಂಖ್ಯೆ ಪಡೆದು ಪ್ರತಿದಿನ ಎಸ್​ಎಂಎಸ್​, ವಿಡಿಯೋ ಸಂದೇಶ ಕಳುಹಿಸುವುದು. ಅಶ್ಲೀಲ ಪದ ಬಳಸುವುದು, ವಿದ್ಯಾರ್ಥಿಗಳನ್ನು ಮಾತನಾಡಿಸುವ ನೆಪದಲ್ಲಿ ಕರೆ ಮಾಡಿ ಅವರ ತಾಯಂದಿರ ಬಳಿ ಮಾತನಾಡುತ್ತಿದ್ದ ಎನ್ನಲಾಗಿದೆ.
ತರಗತಿ ಮುಗಿದ ಬಳಿಕ ವಿದ್ಯಾರ್ಥಿಗಳ ತಾಯಂದಿರಿಗೆ ವಾಟ್ಸ್​ಆ್ಯಪ್​ನಲ್ಲಿ ಸುರೇಶ್​ ಅಶ್ಲೀಲವಾಗಿ ಮೆಸೇಜ್ ಮಾಡಿ‌ ಕಿರುಕುಳ ಕೊಡುವುದು ಮಾತ್ರವಲ್ಲ, ಗ್ರಾಮದ ಕೆಲ ಯುವಕರೊಂದಿಗೆ ಸುರೇಶ್ ಪ್ರತಿನಿತ್ಯ ಪಾರ್ಟಿ ಮಾಡುತ್ತಾ ಕುಣಿಸು ಕುಪ್ಪಳಿಸುತ್ತಿದ್ದ.
ಶಾಲೆಗೆ ನಿರಂತರ ಗೈರಾಗುವುದು, ಶಾಲೆಗೆ ಬಂದರೂ ಬೇಗನೆ ಹೊರಡುವುದು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ತಿಂಗಳ ಹಿಂದೆ ಗ್ರಾಮಸ್ಥರು ಮಧುಗಿರಿ ಡಿಡಿಪಿಐ ರೇವಣಸಿದ್ದಪ್ಪ ಅವರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ತನಿಖೆ ನಡೆಸಿದಾಗ ಆರೋಪ ಸಾಬೀತಾಗಿದೆ. ಹಾಗಾಗಿ ಶಿಕ್ಷಕ ಸುರೇಶ್​ನನ್ನು ಕೆಲಸದಿಂದ ಸೋಮವಾರ ಅಮಾನತು ಮಾಡಲಾಗಿದೆ.
ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 17 =
Remember me
