ಕಲಬುರಗಿ:ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಿಲ್ಲ, ಸಲ್ಲಿಸುವುದೂ ಇಲ್ಲ. ಪಕ್ಷ ಹೇಳಿದ್ದನ್ನು ಮಾಡುವೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ಕಲಬುರಗಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದವರು ಯಾರು ವಹಿಸಿಕೊಳ್ಳಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಆದರೆ ನಾನು ಎಐಸಿಸಿ ಅಧ್ಯಕ್ಷ ಸ್ಥಾನದ ಅಕಾಂಕ್ಷಿ ಅಲ್ಲ ಎಂದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ನಾವ್ಯಾರೂ ಅಧ್ಯಕ್ಷರಾಗುವುದಿಲ್ಲ ಎಂದಿದ್ದರು. ಆದರೆ ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರೇ ಅದ್ಯಕ್ಷರಾಗಬೇಕು. ಇನ್ಮೊಮ್ಮೆ ಅವರ ಮನವೊಲಿಸಲು ಪ್ರಯತ್ನಿಸುವೆ ಎಂದು ಪ್ರಶ್ನೆಯೊಂದಕ್ಕೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿದರು.
ಮಾಜಿ ಸಚಿವರಾದ ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ ಪಾಟೀಲ್, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಡಾ.ಎಸ್.ಬಿ.ಕಾಮರಡ್ಡಿ, ನೀಲಕಂಠ ಮೂಲಗೆ, ಸೋಮಶೇಖರ್ ಗೋನಾಯಕ, ಮಹಾಂತಪ್ಪ ಸಂಗಾವಿ ಇದ್ದರು.
30 ಎಕರೆ ಭೂಮಿ, 7 ಮನೆ, 11 ಮಕ್ಕಳಿದ್ದರೂ ತಾಯಿಗಿಲ್ಲ ಆಸರೆ… ಕಣ್ಣೀರಿಡುತ್ತಲೇ ದಯಾಮರಣ ಬೇಡಿದ ಹಾವೇರಿಯ ಅಜ್ಜಿ

ಬಡತನ ಮೆಟ್ಟಿ ನಿಲ್ಲಬೇಕು ಅನ್ನುವಷ್ಟರಲ್ಲಿ ಆಟವಾಡಿದ ವಿಧಿ… ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
