ಮಂಗಳೂರು:ನಗರದ ಕರಂಗಲ್ಪಾಡಿಯ ಪ್ರೀತಿ ಮನೋಜ್(47) ಬಾರದ ಲೋಕಕ್ಕೆ ಹೋಗುವಾಗಲೂ ಹಲವರ ಜೀವ ಉಳಿಸುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ಬಳ್ಳಾಲ್‌ಬಾಗ್‌ನಲ್ಲಿ ಏ.9ರಂದು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದಾರೂ ಫಲಿಸಲಿಲ್ಲ. ಶನಿವಾರ ಪ್ರೀತಿ ಅವರ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಖಚಿತಪಡಿಸಿದ್ದು, ನೋವಲ್ಲೂ ಕುಟುಂಬಸ್ಥರು ಪ್ರೀತಿಯ ಅಂಗಾಂಗ ದಾನ ಮಾಡಲು ನಿರ್ಧಾರ ಕೈಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪ್ರೀತಿ ಅವರು ಏ.9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಮಣ್ಣಗುಡ್ಡೆ ನಿವಾಸಿ, ಉದ್ಯಮಿ ಶ್ರವಣ್ ಕುಮಾರ್ ಎಂಬುವರ ಕಾರು ರಸ್ತೆ ವಿಭಜಕವನ್ನು ದಾಟಿ, ಮತ್ತೊಂದು ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟಿಯಲ್ಲಿದ್ದ ಪ್ರೀತಿ ಮನೋಜ್ ಗಂಭೀರ ಗಾಯಗೊಂಡಿದ್ದರು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಶನಿವಾರ ವೈದ್ಯರು ಖಚಿತ ಪಡಿಸಿದ್ದಾರೆ. ಕಾರು ಚಾಲಕ ಶ್ರವಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಈರುಳ್ಳಿ ತುಂಬಿದ್ದ ವಾಹನ-ಹಾಲಿನ ಕ್ಯಾಂಟರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seven =
Remember me
