ಮಂಗಳೂರು:ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಬುಧವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಅವರು ಮರಕಡದಲ್ಲಿ ಮೂಲ ಮಠ ಹೊಂದಿದ್ದರು. ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ ನಿರ್ಮಿಸಿದ್ದರು. ಕಂರ್ಬಿಸ್ಥಾನ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ನವೀಕರಣ ಕಾರ್ಯದಲ್ಲೂ ಮಹತ್ವದ ಪಾತ್ರ ನಿರ್ವಹಿಸಿದ್ದರು.
ಮರಕಡದಲ್ಲಿ ಹೊಸ ದೇವಸ್ಥಾನ ಹಾಗೂ ಗುರು ಪೀಠ ನಿರ್ಮಾಣ ಹಂತದಲ್ಲಿದ್ದು, ಮುಂದಿನ ತಿಂಗಳು ಗುರುಪೀಠ ಲೋಕಾರ್ಪಣೆ ಮತ್ತು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿತ್ತು.
ಇಂದು(ಗುರುವಾರ) ಮಧ್ಯಾಹ್ನ 3 ಗಂಟೆ ತನಕ ಮರಕಡ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4ಕ್ಕೆ ಮಡ್ಯಾರ್​ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.
ಊರಿಗೆ ಊರೇ ಅನಾರೋಗ್ಯ ಪೀಡಿತ: ಡೋಲಿಯಲ್ಲಿ ರೋಗಿಗಳನ್ನು ಸಾಗಿಸುತ್ತಿದ್ದವರಿಗೂ ಜ್ವರ! ದೊಡ್ಡಾಣೆ ಗ್ರಾಮಸ್ಥರ ಗೋಳು ಕೇಳೋರಿಲ್ಲ

ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
