ಹುಬ್ಬಳ್ಳಿ:ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ, ಜಿಲ್ಲಾ ನಿವೃತ್ತ ಆರೋಗ್ಯಾಧಿಕಾರಿ ಡಾ.ಮಲ್ಲನಗೌಡ ಪಾಟೀಲ್ ಮುನೇನಕೊಪ್ಪ ಅವರು ಬುಧವಾರ ಬೆಳಗ್ಗೆ ನಿಧನರಾದರು.
ಡಾ.ಮಲ್ಲನಗೌಡ ಪಾಟೀಲ್ ಮುನೇನಕೊಪ್ಪ ಅವರಿಗೆ 69 ವರ್ಷ ವಯಸ್ಸಾಗಿತ್ತು. ನವಲಗುಂದ ತಾಲೂಕಿನ ಅಮರಗೋಳ ಮೂಲದ ಅವರು ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಯುಸಿರೆಳೆದರು. ಸಾವಿನಲ್ಲೂ ಸಾರ್ಥಕತೆ ಮರೆದಿದ್ದು, ಹಲವರ ಬದುಕಿಗೆ ಬೆಳಕಾಗಿದ್ದಾರೆ.
ಮೃತರ ಆಶಯದಂತೆ ಅವರ ನೇತ್ರಗಳನ್ನು ಹುಬ್ಬಳ್ಳಿಯ ಡಾ.ಎಂ.ಎಂ.ಜೋಷಿ ನೇತ್ರ ಭಂಡಾರಕ್ಕೆ ದಾನ ಮಾಡಲಾಗಿದೆ. ಅವರು ವಿದ್ಯಾಭ್ಯಾಸ ಮಾಡಿದ ಕಿಮ್ಸ್​ ವೈದ್ಯಕೀಯ ಕಾಲೇಜಿಗೆ ಅವರ ಇಚ್ಛೆಯಂತೆ ಮೃತದೇಹವನ್ನು ಕುಟುಂಬಸ್ಥರು ಹಸ್ತಾಂತರಿಸಲಿದ್ದಾರೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಹುಬ್ಬಳ್ಳಿಯ ವಿಜಯನಗರದ ನಿವಾಸದಲ್ಲಿ ಪಾರ್ಥಿವ ಶರೀರದ ಅಮತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಕಮ್ಸ್​ ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತೆ.
ಡಾ.ಮಲ್ಲನಗೌಡ ಪಾಟೀಲ್ ಅವರು ಬುದುಕಿರುವಾಗಲೇ ನೇತ್ರದಾನ ಮತ್ತು ದೇಹದಾನದ ಬಗ್ಗೆ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ಅವರ ಇಚ್ಛೆಯಂತೆ ಕುಟುಂಬಸ್ಥರು ದಾನ ಮಾಡಿದ್ದಾರೆ.
ಮೈಸೂರು ಅರಮನೆಯಲ್ಲಿ ಮರಿಗೆ ಜನ್ಮ ನೀಡಿದ ಲಕ್ಷ್ಮೀ ಆನೆ! ಆನೆ ಗರ್ಭಿಣಿ ಎಂಬುದು ನಮ್ಗೆ ಗೊತ್ತೇ ಇರಲಿಲ್ಲ… ಎಂದ ಅಧಿಕಾರಿಗಳು

ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಗಂಡ… ಚೀರಾಡುತ್ತಾ ಗಂಡನನ್ನೇ ಬಿಗಿದಪ್ಪಿಕೊಂಡ ಪತ್ನಿ! ಮೈಸೂರಲ್ಲಿ ಭೀಕರ ಘಟನೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eleven − nine =
Remember me
