ಬೆಂಗಳೂರು:ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ.
ಸೋಮವಾರ ವೇಳಾಪಟ್ಟಿ ಪ್ರಕಟಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಜು.25ರಿಂದ ಆ.1ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ನಾಮಪತ್ರ ಹಿಂಪಡೆಯಲು ಆ.4ಕ್ಕೆ ಕೊನೇ ದಿನ. ಆ.11ರಂದು ಬೆಳಗ್ಗೆ 9 ರಿಂದ ಸಂಜೆ 4ರ ವರೆಗೆ‌ ಮತದಾನ ನಡೆಯಲಿದೆ. ಅಂದು ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ.
ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಸ್ಥಾನ ಮತ್ತು ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ಕಳೆದ ಮಾರ್ಚ್​ನಲ್ಲಿ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ಅವರು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ ಇಬ್ರಾಹಿಂಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.
2024ರ ಜೂನ್ 17ರ ವರೆಗೂ ಎಂಎಲ್​ಸಿ ಸದಸ್ಯತ್ವ ಇತ್ತು. ಅವಧಿಗೂ ಮುನ್ನವೇ ಇಬ್ರಾಹಿಂ ರಾಜೀನಾಮೆ ನೀಡಿದ ಹಿನ್ನೆಲೆ ಉಪ ಚುನಾವಣೆ ನಡೆಯುತ್ತಿದೆ.
ಮೊಸರು, ಮಜ್ಜಿಗೆ, ಲಸ್ಸಿ ದರ ತಗ್ಗಿಸಲು ಕೆಎಂಎಫ್​ಗೆ ಸಿಎಂ ಸೂಚನೆ

ಬೆಂಗಳೂರಲ್ಲಿ ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ! ಆತಂಕದಲ್ಲಿ ಪೋಷಕರು, ಸಾವಿರಾರು ಮಕ್ಕಳ ಸ್ಥಳಾಂತರ

ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ: ನನ್ ಹೆಸ್ರನ್ನ ಮಿಸ್​ಯೂಸ್ ಮಾಡ್ಬೇಡಿ… ಹುಚ್ಚ ವೆಂಕಟ್ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
