ಬಿಡದಿ:ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು ಮಂಗಳವಾರ ಬೆಳಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು.
ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಎಚ್​ಡಿಕೆ ಅವರ ತೋಟಕ್ಕೆ ಭೇಟಿ ನೀಡಿದ ಶ್ರೀಗಳು, ತಮ್ಮ ಸಮುದಾಯಗಳ ಸ್ಥಿತಿಗತಿ, ಸಮಸ್ಯೆ, ಸವಾಲುಗಳು ಸೇರಿದಂತೆ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು.
ದೊಡ್ಡಬಳ್ಳಾಪುರದ ವಾಲ್ಮೀಕಿ ಗುರು ಪೀಠದ ಶ್ರೀ ಬ್ರಹ್ಮಾನಂದ ಗುರೂಜಿ, ಈಡಿಗ ಗುರುಪೀಠದ ರಾಣಿಬೆನ್ನೂರು ಶ್ರೀ ಪ್ರಣವಾನಂದ ಸ್ವಾಮಿ, ಚಿತ್ರದುರ್ಗದ ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ವಾಡಿಯ ಸವಿತಾ ಸಮಾಜ ಗುರುಪೀಠದ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ಹಿರಿಯೂರಿನ ಅರಳಯ್ಯ ಗುರುಪೀಠದ ಶ್ರೀ ಅರಳಯ್ಯ ಮಹಾಸ್ವಾಮೀಜಿ, ಕಲಬುರಗಿಯ ಪಿಂಜಾರ ಗುರುಪೀಠದ ಶ್ರೀ ಸಿದ್ದಬಸವ ಕಬೀರಾನಂದ ಸ್ವಾಮೀಜಿ, ಕಲಬುರಗಿಯ ಶ್ರೀ ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ವರಲಿಂಗ ಸ್ವಾಮೀಜಿ, ಹರಿಹರದ ಕೇದಾರ ಗುರು ಪೀಠದ ಶಾಖಾ ಮಠದ ಶ್ರೀ ಸಿದ್ದಲಿಂಗ ಶಿವಾಚರ್ಯ ಸ್ವಾಮೀಜಿ, ಅಗಡಿಯ ಅಕ್ಕಿಮಠದ ಶ್ರೀ ಗುರುಲಿಂಗ ಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ ಗಂಗಾಧರೇಶ್ವರ ಶ್ರೀಗಳು, ಶಿವಮೊಗ್ಗದ ರುದ್ರಾಕ್ಷಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಬೆಂಗಳೂರಿನ ಪಿಂಜಾರ ಗುರುಪೀಠದ ಶ್ರೀ ಸಂಗಮಾನಾಥ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಇನ್ನೂ ಅನೇಕ ಸ್ವಾಮೀಜಿಗಳು ಎಚ್​ಡಿಕೆ ಅವರನ್ನು ಭೇಟಿ ಮಾಡಿದರು.
ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ಢಮರುಗ ಯಾರಿಗಾದ್ರೂ ಕಿರಿಕಿರಿ ಮಾಡಿದ್ಯಾ? ಎನ್ನುತ್ತಲೇ ಧ್ವನಿವರ್ಧಕ ವಿವಾದ ಇತ್ಯರ್ಥಕ್ಕೆ ಮಹತ್ವದ ಸಲಹೆ ಕೊಟ್ಟ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 18 =
Remember me
