ಹಾಸನ:ರಾಜ್ಯದಲ್ಲಿ ಹಲಾಲ್​ ಕಟ್​, ಜಟ್ಕಾ ಕಟ್​ ವಿವಾದದ ಬೆನ್ನಲ್ಲೇ ಇನ್ನೊಂದು ಹೊಸ ಅಭಿಯಾನ ಶುರುವಾಗಿದೆ. ಮುಸ್ಲಿಂ ಸಮುದಾಯದವರು ನಮಾಜ್​ ಮಾಡಿ, ಅಲ್ಲಾ ಹು ಅಕ್ಬರ್​ ಎಂದು ಕೂಗುವ ವೇಳೆಗೆ ದೇವಾಲಯಗಳಲ್ಲಿ ಜೈ ಶ್ರೀರಾಮ್​ ಎಂದು ಕೂಗಿಸುವ ಅಭಿಯಾನಕ್ಕೆ ಮಂಗಳವಾರ ಮುಂಜಾನೆ 5.30ಕ್ಕೆ ಅರಸೀಕೆರೆಯಲ್ಲಿ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಚಾಲನೆ ನೀಡಿದರು. ಧ್ವನಿವರ್ಧಕ ಮೂಲಕ ರಾಮತಾರಕ ಮಂತ್ರ ಪಠಿಸಿದರು.
ಕಾನೂನು ಎಲ್ಲರಿಗೂ ಒಂದೇ:ಅವರು ಅಲ್ಲನನ್ನು ರಾಗದಿಂದಲೇ ಕೂಗುತ್ತಾರೆ. ನಾವೂ ಅದೇ ರೀತಿ ಶ್ರೀರಾಮನನ್ನು ರಾಗದಿಂದಲೇ 5 ಬಾರಿ ಕೂಗಿದ್ದೇನೆ. ಇದನ್ನು ಯಾರೂ ತಡೆಯಬಾರದು. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು ರಿಷಿಕುಮಾರ ಸ್ವಾಮೀಜಿ ಹೇಳಿದರು.
ರಾಜ್ಯಾದ್ಯಂತ ಈ ಅಭಿಯಾನ ವಿಸ್ತರಿಸಲು ಚಿಂತಿಸಲಾಗಿದೆ. ದೇವಸ್ಥಾನಗಳಲ್ಲಿ ಪ್ರತಿದಿನ 5 ಗಂಟೆಗೆ ರಾಮಭಜನೆ ಹಾಕುತ್ತೇವೆ. ಆಜಾನ್​ ನಿಲ್ಲಿಸದಿದ್ದರೆ ದೇವಾಲಯಗಳಲ್ಲಿ ಸ್ಪೀಕರ್​ ಹಾಕುತ್ತೇವೆ. ರಾಮ ಭಜನೆ, ಶಿವನಾಮ, ಓಂಕಾರಗಳನ್ನೂ ಹಾಕುತ್ತೇವೆ ಎಂದು ಹಿಂದು ಪರ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ.
ಚಿಕ್ಕಮಗಳೂರಲ್ಲಿ ಕ್ರಿಕೆಟ್​ ಬೆಟ್ಟಿಂಗ್​ ಜಗಳಕ್ಕೆ ಯುವಕ ಬಲಿ

SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ

ಮೇಕೆ ಜೊತೆ ಯುವಕನ ಮದ್ವೆ! ಕುಟುಂಬಸ್ಥರ ಸಮ್ಮುಖದಲ್ಲೇ ತಾಳಿ ಕಟ್ಟಿದ… ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
