ಬೆಂಗಳೂರು:ಮಾಜಿ ಸಂಸದ ಎಸ್​.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆ ಮೂಲಕ ಕುಣಿಗಲ್​ ವಿಧಾನಸಭಾ ಕ್ಷೇತ್ರದ ಚುಣಾವಣಾ ಅಖಾಡ ರಂಗೇರುತ್ತಿದ್ದು, ಭಾರೀ ಕುತೂಹಲ ಮೂಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಗುರುವಾರ ಬೆಳಗ್ಗೆ ಸದಾಶಿವನಗರದ ಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್​ಪಿಎಂ, 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕುಣಿಗಲ್ ಕ್ಷೇತ್ರದ ಅಭ್ಯರ್ಥಿ ಆಗುವುದು ಖಚಿತ ಎನ್ನುತ್ತಲೇ ಇಂದು ಸಂಜೆಯೊಳಗೆ ಕಾಂಗ್ರೆಸ್​ಗೆ ರಾಜೀನಾಮೆ ಪತ್ರ ಕೊಡುವೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರ ಭಾರಿ ಸುದ್ದಿಯಲ್ಲಿತ್ತು. ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಸ್ಪರ್ಧಿಸಿದ್ದರು. ಎಸ್​.ಪಿ.ಮುದ್ದಹನುಮೇಗೌಡರಿಗೆ ಕೊನೇ ಕ್ಷಣದಲ್ಲಿ ಕಾಂಗ್ರೆಸ್​ನಿಂದ ಟಿಕೆಟ್​ ಕೈತಪ್ಪಿತ್ತು. ಅಂತಿಮವಾಗಿ ಸ್ಪರ್ಧೆಯಿಂದ ಕಾಂಗ್ರೆಸ್ ಹಿಂದೆ ಸರಿದಿತ್ತು. ಈ ಕುರಿತು ಈ ಹಿಂದೆ ಹಲವು ಬಾರಿ ಎಸ್​ಪಿಎಂ ಆಕ್ರೋಶ ಹೊರ ಹಾಕಿದ್ದರು. ಈ ಭಾರಿ ಕುಣಿಗಲ್​ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಲು ಸಜ್ಜಾಗಿರುವ ಎಸ್​ಪಿಎಂ, ಕಾಂಗ್ರೆಸ್​ನಿಂದ ಟಿಕೆಟ್​ ಕೇಳಿದ್ದರು. ಆದರೆ, ಹಾಲಿ ಶಾಸಕ ರಂಗನಾಥ್​ ಪರ ಡಿ.ಕೆ.ಸುರೇಶ್​ ಮತ್ತು ಡಿಕೆಶಿ ಒಲವಿದ್ದು, ಎಸ್​ಪಿಎಂಗೆ ಕಾಂಗ್ರೆಸ್​ನಿಂದ ಭರವಸೆ ಸಿಕ್ಕಿಲ್ಲ. ಹಾಗಾಗಿ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸುತ್ತಲೇ ಮತ್ತೊಮ್ಮೆ ಬೇಸರ ಹೊರಹಾಕಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಪಕ್ಷದಿಂದ ನನ್ನನ್ನು ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ನನ್ನಿಂದ ಏನಾದರೂ ತಪ್ಪಾಗಿದ್ರೆ ಹೇಳಲಿ ಎಂದು ಕೇಳಿದ್ದೇನೆ. 1989ರಲ್ಲಿ ಕುಣಿಗಲ್ ಕ್ಷೇತ್ರಕ್ಕೆ ಬಿಫಾರಂ ಕೊಟ್ರು, ಬಳಿಕ ಇನ್ನೊಬ್ಬರಿಗೆ ಸಿ ಫಾರಂ ಕೊಟ್ರು. ಅಂದಿನಿಂದಲೂ ನನಗೆ ಹಲವು ಬಾರಿ ಸಮಸ್ಯೆ ಆಗಿದೆ ಎಂದು ಬೇಸರ ಹೊರಹಾಕಿದರು.
ನಾನು ಕಾಂಗ್ರೆಸ್​ನಿಂದ ದೂರ ಸರಿದಿದ್ದೇನೆ. ಸಾಂಕೇತಿಕವಾಗಿ ಭೇಟಿ ಮಾಡಬೇಕಿತ್ತು. ಹಾಗಾಗಿ ಭೇಟಿ ಮಾಡಿದ್ದೇನೆ. ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಸುರ್ಜೇವಾಲಾ ದೂರವಾಣಿ ಮೂಲಕ ಮಾತನಾಡಿದ್ರು. ಇತ್ತೀಚಿಗೆ ನನ್ನ ಜತೆ ಮಾತನಾಡಿಲ್ಲ. ಇಂದು ಸಂಜೆಯೊಳಗೆ ಕಾಂಗ್ರೆಸ್‌ಗೆ ಅಧಿಕೃತವಾಗಿ ರಾಜೀನಾಮೆ ಕೊಡ್ತೀನಿ ಎಂದರು.
ನಾನು ತುಮಕೂರು ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷನಾಗಿ ಹತ್ತು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಹಲವು ಅವಕಾಶ ಕೊಟ್ಟಿದೆ. ಅದಕ್ಕಿಂತಲೂ ಹೆಚ್ಚಾಗಿ ನಾನು ಪಕ್ಷಕ್ಕೆ ದುಡಿದಿದ್ದೇನೆ. ನಾಲ್ಕು ಬಾರಿ ನನಗೆ ಟಿಕೆಟ್ ತಪ್ಪಿತ್ತು. 2019ರ ಲೋಕಸಭಾ ಚುನಾವಣೆಯಲ್ಲೂ ನನಗೆ ಟಿಕೆಟ್ ತಪ್ಪಿಸಿದ್ರು. 2019ರಲ್ಲಿ ನನಗೆ ಟಿಕೆಟ್ ತಪ್ಪಿಸುವಲ್ಲಿ ಕೆಲವರ ಪಾತ್ರ ಇದೆ. ವೇಣುಗೋಪಾಲ್ ಅವರು ಆ ಸಮಯದಲ್ಲಿ ನನಗೆ ಕೆಲ ಭರವಸೆ ಕೊಟ್ಟಿದ್ರು. ಈಗ ಅವರು ಅದರ ಬಗ್ಗೆ ಮಾತನಾಡಿಲ್ಲ. ಇತ್ತಿಚೆಗೆ ನಡೆದ ರಾಜಕೀಯ ವಿದ್ಯಮಾನಗಳಿಂದ ಇಂತಹ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.
ಕಾಂಗ್ರೆಸ್​ಗೆ ಎಸ್​ಪಿಎಂ ಗುಡ್​ ಬೈ: ಮುದ್ದಹನುಮೇಗೌಡರ ಮುಂದಿನ ನಡೆ ಬಿಜೆಪಿ- ಆಮ್​ ಆದ್ಮಿ?

ಡಿಕೆಶಿ ಮನೆಗೆ ಎಸ್​ಪಿಎಂ ಭೇಟಿ: ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ನಿರ್ಧಾರ ಪ್ರಕಟಿಸ್ತಾರಾ ಮುದ್ದಹನುಮೇಗೌಡ?

ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು: ದೀರ್ಘದಂಡ ನಮಸ್ಕಾರ ಹಾಕಿ ಗ್ರಾಮಸ್ಥರು ಪ್ರಾರ್ಥಿಸಿದರೂ ಫಲ ನೀಡಲಿಲ್ಲ ದೇವರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 5 =
Remember me
