ಬೆಂಗಳೂರು:ಖ್ಯಾತ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಅವರ ನಿರ್ದೇಶನದಂತೆ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಆದೇಶಿಸಿದ್ದಾರೆ. ಪಕ್ಷವನ್ನು ಸದೃಢವಾಗಿ ಬೆಳೆಸುವಲ್ಲಿ ಮುಖ್ಯಮಂತ್ರಿ ಚಂದ್ರು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.
ನೂತನ ಜವಾಬ್ದಾರಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಯನ್ನು ಜಾರಿಗೆ ತಂದಿವೆ. ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ, ಇಲ್ಲಿಯೂ ಎಎಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿಯು ಶ್ರಮಿಸಲಿದೆ. ನನ್ನ ಮೇಲೆ ವಿಶ್ವಾಸವ ಇಟ್ಟು ಸಮಿತಿಯ ಅಧ್ಯಕ್ಷ ಜವಾಬ್ದಾರಿ ನೀಡಿದ ಪಕ್ಷದ ಮುಖಂಡರಿಗೆ ಧನ್ಯವಾದಗಳು ಎಂದರು.
ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಜೂನ್‌ನಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದರು. ಬೆಂಗಳೂರಿನ ಪರಾಗ್‌ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಚಂದ್ರು ಅವನ್ನು ಪಕ್ಷದ ಮುಖಂಡರು ಬರಮಾಡಿಕೊಂಡಿದ್ದರು.
ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್​ ಮಾಡು… ಸುದೀಪ್​ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್​​ ಹಿಗ್ಗಾಮುಗ್ಗಾ ತರಾಟೆ

ಸಾಕ್ಷ್ಯಚಿತ್ರದಲ್ಲಿ ಹಿಂದು ದೇವರಿಗೆ ಅಪಮಾನ, ಕಾಳಿ ಮಾತೆ ಬಾಯಲ್ಲಿ ಸಿಗರೇಟ್​! ಕ್ಷಮೆ ಕೇಳದೆ ನಿರ್ದೇಶಕಿ ಮೊಂಡುವಾದ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 + 18 =
Remember me
