ಮೈಸೂರು:ಹರಕೆ ಮುಡಿ ಕೂದಲು ಪ್ರಕರಣ ಸಂಬಂಧ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಪರ ತಿ.ನರಸೀಪುರ ಸಿವಿಲ್ ನ್ಯಾಯಾಲಯದಿಂದ ಐತಿಹಾಸಿಕ ತೀರ್ಪು ಬಂದಿದೆ.
ಹರಕೆ ಮುಡಿ ಕೂದಲು ತೆಗೆಯುವ ಹಾಗೂ ಮುಡಿ ಕೂದಲಿನ ಸಂಪೂರ್ಣ ಹಕ್ಕು ತಮ್ಮದೇ ಎಂದು ನಯನಜಕ್ಷತ್ರಿಯ ಸಂಘ ದಾವೆ ಹೂಡಿತ್ತು. ಕೂದಲಿನ‌ ಸಂಪೂರ್ಣ ಹಕ್ಕು ದೇವಾಲಯಕ್ಕೆ ಸೇರಿದ್ದು ಎಂದು ದೇವಾಲಯದ ಆಡಳಿತ ಮಂಡಳಿ ಪ್ರತಿಪಾದಿಸಿತ್ತು.
25 ವರ್ಷಗಳಿಂದ ನಡೆಯುತ್ತಿದ್ದ ಹರಕೆ ಮುಡಿ ಕೂದಲು ಪ್ರಕರಣದ ವಾದ-ವಿವಾದಕ್ಕೆ ಅಂತಿಮ ತೆರೆ ಬಿದ್ದಿದ್ದು, ಇನ್ಮುಂದೆ ಮುಡಿ ಕೂದಲಿನ ಸಂಪೂರ್ಣ ಹಕ್ಕು ದೇವಾಲಯದ್ದು. ಮುಡಿ ಕೂದಲು ತೆಗೆಯುವ ಕಾರ್ಯ ಮಾತ್ರ ನಯನಜಕ್ಷತ್ರಿಯ ಸಂಘಕ್ಕೆ ಸೇರಿದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಮುಡಿ ಕೂದಲಿನ ಸಂಪೂರ್ಣ ಹಕ್ಕಿನಿಂದ ದೇವಾಲಯಕ್ಕೆ ಮತ್ತಷ್ಟು ಆದಾಯ ಹೆಚ್ಚಲಿದೆ.
ಕೇವಲ ಮುಡಿ ತೆಗೆಯುವುದರಿಂದ ನಮ್ಮ ಬದುಕು ಹಸನಾಗುವುದಿಲ್ಲ. ಕೂದಲಿನಿಂದ ಬರುವ ಆದಾಯದಲ್ಲಿ ಇದರಿಂದ ಬರುವ ಆದಾಯದಲ್ಲಿ ಅನಾದಿಕಾಲದಿಂದಲೂ ಪ್ರತಿ ವರ್ಷ ದೊಡ್ಡಜಾತ್ರೆ ,ಚಿಕ್ಕಜಾತ್ರೆ ಗಿರಿಜಾ ಕಲ್ಯಾಣ ಕಾರ್ತಿಕ ಮಾಸಗಳಲ್ಲಿ ವಿವಿಧ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ದೇವಾಲಯದ ಪರ ತೀರ್ಪು ಬಂದಿರುವ ವಿಚಾರ ನಮಗೆ ಅಷ್ಟಾಗಿ ತಿಳಿದಿಲ್ಲ. ನಾವು ಕೂಡ ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತೇವೆ ಎಂದು ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅ
ವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಮದ್ವೆ ಆದ ದಿನದಿಂದ ಗಂಡ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ

ಆಸ್ಪತ್ರೆಯಲ್ಲೇ ಕರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಂಬುಲೆನ್ಸ್​ ಚಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
