ಬೆಂಗಳೂರು:ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ದುರಂತ ಅಂತ್ಯ ಕಂಡ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಅವಘಡ ಯಲಹಂಕ ನ್ಯೂ ಟೌನ್​ನಲ್ಲಿ ಸಂಭವಿಸಿದೆ.
ಇಲ್ಲಿನ ಅರ್ಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಇಬ್ಬರು ಕೋವಿಡ್ ರೋಗಿಗಳು ಮೃತಪಟ್ಟ ಘಟನೆ ಸೋಮವಾರ ಮಧ್ಯರಾತ್ರಿ ನಡೆದಿದೆ. ರಾತ್ರಿ 12:30ರ ಸುಮಾರಿಗೆ ಆಕ್ಸಿಜನ್ ಖಾಲಿಗಿದ್ದು, ರಾತ್ರಿ 1:30ರ ಸುಮಾರಿಗೆ ಆಕ್ಸಿಜನ್ ತಂದರಾದರೂ ಅಷ್ಟರಲ್ಲಿ ಇಬ್ಬರ ಪ್ರಾಣ ಹೋಗಿತ್ತು.
ಅರ್ಕ ಆಸ್ಪತ್ರೆಯಲ್ಲಿ 15ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ ಆಕ್ಸಿಜನ್​ ಖಾಲಿ ಆಗ್ತಿದ್ದಂತೆ ಇಲ್ಲಿನ ಸಿಬ್ಬಂದಿ ಯಲಹಂಕ ‌ನ್ಯೂ ಟೌನ್ ಪೊಲೀಸರಿಗೆ ಕರೆ ಮಾಡಿದ್ದು, ಇನ್​ಸ್ಪೆಕ್ಟರ್ ಸತ್ಯನಾರಾಯಣ್ ಆಸ್ಪತ್ರೆ ಬಳಿ ದೌಡಾಯಿಸಿದರು. ಕೂಡಲೇ ಸೋನುಸೂದ್ ಚಾರಿಟಬಲ್ ಟ್ರಸ್ಟ್ ಸದಸ್ಯರಿಗೆ ಕರೆ ಮಾಡಿದರು. ಮನವಿಗೆ ಸ್ಪಂದಿಸಿದ ಸೋನು ಸೂದ್ ಟ್ರಸ್ಟ್ ಸಿಬ್ಬಂದಿ, 11 ಆಕ್ಸಿಜನ್ ಸಿಲಿಂಡರ್ ಒದಗಿಸುವ ಮೂಲಕ ದೊಡ್ಡ ಅನಾಹುತವನ್ನ ತಪ್ಪಿಸಿದ್ದಾರೆ. ಟ್ರಸ್ಟ್​ನ ಅಶ್ಮತ್, ರಾಧಿಕಾ, ರಾಘವ್ ಸಿಂಗಲ್, ಅಮಿತ್ ತಂಡ ಬೈಕ್ ಹಾಗೂ ಕಾರುಗಳಲ್ಲಿ ಆಕ್ಸಿಜನ್ ಸಿಲಿಂಡರ್ ಪೂರೈಸಿದ್ದಾರೆ.
ಆಕ್ಸಿಜನ್​ ಕೊರತೆಯಿಂದ ಮೃತಪಟ್ಟವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾರೆ. ಇವರನ್ನ ಶನಿವಾರ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದೆವು. ನನ್ನ ಅಕ್ಕನಿಗೆ 38 ವರ್ಷ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬ ಕಂಗಾಲಾಗಿದೆ ಎಂದು ಮೃತಳ ತಮ್ಮ ಅನಿಲ್ ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ಕರೊನಾಗೆ ದಂಪತಿ ಬಲಿ: ಸೋಂಕು ತಗುಲಿದ ಮೂರೇ ದಿನಕ್ಕೆ ದುರಂತ ಅಂತ್ಯ

ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
