ಚಾಮರಾಜನಗರ:ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸತ್ತದ್ದು 24 ರೋಗಿಗಳಲ್ಲ, 34 ಜನ. ಅಧಿಕಾರಿಗಳು ಸತ್ಯ ಮುಚ್ಚಿಟ್ಟಿದ್ದಾರೆ. ಖಚಿತ ಮಾಹಿತಿಯನ್ನು ಕೊಟ್ಟಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ಆರೋಗ್ಯ ಸಚಿವರು ಕೇವಲ ಮೂರು ಮಂದಿ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. 24 ಮಂದಿ ಹೊರತುಪಡಿಸಿ ಉಳಿದ 10 ಮಂದಿಯ ಹೆಸರು ಪಟ್ಟಿಯಲ್ಲಿ ಇಲ್ಲ. ಅಧಿಕಾರಿಗಳು ಸಚಿವರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಈ ಘೋರ ದುರಂತದ ಬಗ್ಗೆ ಉನ್ನತಮಟ್ಟದಲ್ಲಿ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸತ್ತವರ ಕುಟಂಬಗಳಿಗೆ ಪರಿಹಾರ ನೀಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.ಇದನ್ನೂ ಓದಿರಿಈ ಸರ್ಕಾರವನ್ನ ನಂಬಿದ್ರೆ ನಮ್ಮೆಲ್ಲರ ತಿಥಿ ಆಗುತ್ತೆ, ಬರೆದಿಟ್ಟುಕೊಳ್ಳಿ: ಸಿಎಂ ವಿರುದ್ಧ ಏಕವಚನದಲ್ಲೇ ಶಾಸಕ ವಾಗ್ದಾಳಿ
ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇತ್ತ ಪ್ರತಿಷ್ಠೆಗೆ ಅಮಾಯಕರು ಬಲಿಯಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 34ರಿಂದ 35 ಜನ ಸತ್ತಿದ್ದಾರೆ. ಸಚಿವರು 24 ಜನ ಸತ್ತಿದ್ದಾರೆ ಅಂತಾ ಸುಳ್ಳು ಮಾಹಿತಿ ಕೊಡ್ತಿದ್ದಾರೆ. ಸತ್ತವರಿಗೆ ನ್ಯಾಯ ಸಿಗಬೇಕಾದ್ರೆ ನ್ಯಾಯಾಂಗ ತನಿಖೆ ಮಾಡಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಆಗ್ರಹಿಸಿದ್ದಾರೆ.
ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.
ಚಾಮರಾಜನಗರ ದುರಂತಕ್ಕೆ ಕ್ಷಮೆಯೇ ಇಲ್ಲ… ಆಕ್ಸಿಜನ್ ಕೊರತೆಯಿಂದಾಗಿದ್ದರೆ ಸರ್ಕಾರವೇ‌ ಹೊಣೆ: ಸಿ.ಟಿ.ರವಿ
ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್
ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 6 =
Remember me
