ತುಮಕೂರು:ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದರ ಸಾರಿಗೆ ಸಚಿವ ಶ್ರೀರಾಮುಲು ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಿದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂಪಾಯಿ ಕೊಡುವುದಾಗಿ ಸಾರಿಗೆ ಸಚಿವರು ಇದೇ ವೇಳೆ ಹೇಳಿದರು.

ಪಾವಗಡ ಸರ್ಕಾರಿ ಆಸ್ಪತ್ರೆಗೂ ಭೇಟಿ ನಿಡಿದ ಶ್ರೀರಾಮುಲು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಪಾವಗಡ ಸರ್ಕಾರಿ ಆಸ್ಪತ್ರೆ ಶವಾಗಾರದ ಮುಂದೆ ವಿದ್ಯಾರ್ಥಿಗಳು ಹಾಗೂ ಪೋಷಕರು ಶ್ರೀರಾಮುಲು ಅವರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಈ ಸಾವಿಗೆ ಯಾರು ಹೊಣೆ? ನಮ್ಮ ಕುಟುಂಬದ ಗತಿಯೇನು? ಎಂದು ಕಣ್ಣೀರು ಹಾಕಿದರು.
ಬಸ್ ಪಲ್ಟಿಯಾದ ದುರಂತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣಕ್ಕೀಡಾಗಿದ್ದಾರೆ. 43 ಮಂದಿ ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಪೋತಗಾನಹಳ್ಳಿ ಅಮೂಲ್ಯ(20), ದಾದಾವಲಿ(20) ಹಾಗೂ ಸೂಲನಾಯಕನಹಳ್ಳಿಯ ಅಜಿತ್ ಕುಮಾರ್(22), ಬೆಸ್ತರಹಳ್ಳಿಯ ಮೆಕಾನಿಕ್ ಶಾನವಾಜ್ (18) ಹಾಗೂ ವೈ.ಎನ್.ಹೊಸಕೋಟೆಯ ಕಲ್ಯಾಣ್ ಕುಮಾರ್(22) ಮೃತಪಟ್ಟಿದ್ದಾರೆ‌. ನಾಲ್ವರು ಸ್ಥಳದಲ್ಲೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿದ್ದ ದಾದಾವಲಿ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ​ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಸ್ಥಳೀಯರು ಮಾತ್ರ 8 ಮಂದಿ ಮೃತಪಟ್ಟಿದ್ದಾರೆ ಎನ್ನುತ್ತಿದ್ದಾರೆ.
ಪಾವಗಡದಲ್ಲಿ ಬಸ್​ ಅಪಘಾತ: ಕಂಬನಿ ಮಿಡಿಯುತ್ತಲೇ ಹೆಚ್ಚಿನ ಪರಿಹಾರ ಕೊಡುವಂತೆ ಆಗ್ರಹಿಸಿದ ಎಚ್​ಡಿಕೆ

ಪಾವಗಡ ವ್ಯಾಪ್ತಿ ಎಲ್ಲ ಖಾಸಗಿ ಬಸ್‌ಗಳ ಪರವಾನಗಿ ರದ್ದು: 5 ಮಂದಿ ಸಾವಿನ ಬಳಿಕ ಎಚ್ಚೆತ್ತ ಸಾರಿಗೆ ಸಚಿವ

ಪಾವಗಡದಲ್ಲಿ ಭೀಕರ ಅಪಘಾತ: 5ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
