ಮಂಗಳೂರು:ಹಿಂದೂಸ್ತಾನ್ ಪೆಟ್ರೋಲಿಯಂಗೆ ಸೇರಿದ 20 ಅಡಿ ಆಳದಲ್ಲಿದ್ದ ಬೃಹತ್ ಪೈಪ್​ಲೈನ್​ಗೆ ಕನ್ನ ಹಾಕಿದ ಖತರ್ನಾಕ್​ ಕಳ್ಳನೊಬ್ಬ ಪೆಟ್ರೋಲ್​ ಕದ್ದಿದ್ದಾನೆ…
ಹೌದು, ಇಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್ ಪೂರೈಕೆ ಮಾಡುವ ಹಿಂದೂಸ್ತಾನ್ ಪೆಟ್ರೋಲಿಯಂಗೆ ಸೇರಿದ ಬೃಹತ್ ಪೈಪ್​ಲೈನ್​ ಐವನ್ ಎಂಬಾತನಿಗೆ ಸೇರಿದ ಖಾಸಗಿ ಜಮೀನಿನ ರಸ್ತೆಯಲ್ಲಿ ಹಾದು ಹೋಗಿದೆ.
ಇದನ್ನೇ ಬಂಡವಾಳ ಮಾಡಿಕೊಂಡ ಐವನ್​, ತನ್ನ ಭೂಮಿ ಬಳಿ ಗುಂಡಿ ತೋಡಿ ಪೈಪ್​ಲೈನ್​ ಕೊರೆದು ಅದಕ್ಕೆ ಇನ್ನೊಂದು ಪೈಪ್​ ಅಳವಡಿಸಿದ್ದಾನೆ. ​ಅರ್ಧ ಕಿ.ಮೀ. ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಮಾರಾಟ ಮಾಡುತ್ತಿದ್ದ.

ಪೆಟ್ರೋಲ್ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬಂದು ಕಂಪನಿಯವರು ಹುಡುಕಾಟ ನಡೆಸುತ್ತಾ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿ ಪೊಲೀಸರ ಸಮಕ್ಷಮ ಜೆಸಿಬಿ ಮೂಲಕ ಭೂಮಿ ಅಗೆದಾಗ ಕೃತ್ಯ ಬಯಲಾಗಿದೆ. ಆರೋಪಿ ಐವನ್ ಪರಾರಿಯಾಗಿದ್ದು, ಬಂಟ್ವಾಳ ಪೊಲೀಸರಿಂದ ಹುಡುಕಾಟ ಮುಂದುವರಿಸಿದ್ದಾರೆ.
ಕುರಿ ಕದ್ದ ಕಳ್ಳರ ಬದಲು, ಕುರಿ ಮಾಲೀಕರ ಹುಡುಕಾಟಕ್ಕೆ ಹೊರಟ ಪೊಲೀಸರು!

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
