ಉಡುಪಿ:ಲಾಕ್​ಡೌನ್ ಆಗಿದ್ದೇ ಆಗಿದ್ದು ಹಲವು ಜನರು ಭಯಗೊಂಡಿದ್ದಾರೆ. ನಿತ್ಯ ಬಳಕೆ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಒಂದಲ್ಲ ಒಂದು ಅಂಗಡಿಯ ಎದುರು ಕ್ಯೂನಲ್ಲಿ ನಿಲ್ಲುತ್ತಿದ್ದಾರೆ.
ಪೊಲೀಸರಿಗಂತೂ ಅವರಲ್ಲಿ ಅರಿವು ಮೂಡಿಸಿ, ಚದುರಿಸುವುದೇ ದೊಡ್ಡ ಸಾಹಸವಾಗಿಬಿಟ್ಟಿದೆ. ಹೀಗೆ ರಸ್ತೆಗೆ ಇಳಿಯುವರ ಮೇಲೆ ಕೆಲವು ಕಡೆ ಪೊಲೀಸ್​ ಸಿಬ್ಬಂದಿ ಮುಲಾಜಿಲ್ಲದೆ ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಇನ್ನೊಂದಿಷ್ಟು ಪೊಲೀಸರು ಕೈ ಮುಗಿದು ಮನೆಯೊಳಗೆ ಹೋಗಿ ಎಂದು ಬೇಡಿಕೊಳ್ಳುತ್ತಿದ್ದಾರೆ.
ಆದರೆ ಉಡುಪಿ ಜಿಲ್ಲೆಯ ಕಾರ್ಕಳದ ಬೆಳ್ಮಣ್​ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್​ ಸಿಬ್ಬಂದಿಯೋರ್ವ ಕಣ್ಣಲ್ಲಿ ನೀರು ಹಾಕಿದ್ದಾರೆ. ಅಂಗಡಿಮುಂಗಟ್ಟುಗಳ ಎದುರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟಾದಾಗ ಅವರನ್ನು ಚದುರಿಸಲು ಪ್ರಯತ್ನಿಸಿದ್ದಾರೆ.
ದಿನಸಿ ಸಾಮಗ್ರಿಗಳನ್ನು ಕೊಳ್ಳಲು ಮುಗಿಬಿದ್ದ ಜನರ ಬಳಿ ಈ ಪೊಲೀಸ್​ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಒಂದೆಡೆ ಸೇರಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಇದರಿಂದ ಹತಾಶರಾದ ಪೊಲೀಸ್​ ಒಬ್ಬರೇ ನಿಂತು ಕಣ್ಣಲ್ಲಿ ನೀರು ಹಾಕಿದ್ದಾರೆ. (ದಿಗ್ವಿಜಯ ನ್ಯೂಸ್​)
ನಿನ್ನೆ ಮೃತಪಟ್ಟ ವೃದ್ಧೆಗೂ COVID19+ ಕನ್ಫರ್ಮ್ ಆಯ್ತು

ಎಸ್ಸೆಸ್ಸೆಲ್ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಬಿಟ್ಟಿಲ್ಲ- ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
