ಹುಬ್ಬಳ್ಳಿ:ಲೌಡ್​ಸ್ಪೀಕರ್​ ಅಳವಡಿಕೆ ಸಂಬಂಧ ಸುಪ್ರೀಂ ಕೋರ್ಟ್​ ನೀಡಿದ ಆದೇಶವನ್ನು ಪಾಲಿಸದವರ ಮೇಲೆ ಗುಂಡು ಹಾರಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್​, ಒಂದು ವರ್ಷದಿಂದ ಲೌಡ್​ಸ್ಪೀಕರ್​ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇಲ್ಲಿಯವರೆಗೆ ಸುಪ್ರೀಂಕೋರ್ಟ್​ ಆದೇಶ ಪಾಲನೆಯಾಗಿಲ್ಲ. ಹಿಂದುಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವೂ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಜೂ. 8ರಂದು ಬಿಜೆಪಿಯ ಶಾಸಕರು, ಮಂತ್ರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ. ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಗಿದಿದೆ. ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದೆ. ಧಮ್ಕಿ ಕೂಡ ಹಾಕಿದೆ. ಸರ್ಕಾರದ ಸೊಕ್ಕು ಅಡಗಿಸುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಸುಪ್ರೀಂಕೋರ್ಟ್​ ಆದೇಶ ಪಾಲನೆ ಮಾಡದವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದನ್ನು ಸರ್ಕಾರ ಬಹಿರಂಗ ಪಡಿಸಬೇಕು. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನಮಗೆ ಕೊಡಿ. ಹೇಗೆ ಸರ್ಕಾರ ನಡೆಸಬೇಕು ಎನ್ನುವುದನ್ನು ತೋರಿಸುತ್ತೇನೆ. ಬಿಜೆಪಿ ನಿಮ್ಮಪ್ಪನದು ಅಲ್ಲ, ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿದ್ದೇವೆ. ನಮ್ಮ ಶ್ರಮದಿಂದ ನೀವು ಅಧಿಕಾರ ನಡೆಸುತ್ತಿದ್ದೀರಿ ಎಂದು ಅಧಿಕಾರದಲ್ಲಿರುವವರ ವಿರುದ್ಧ ಮುತಾಲಿಕ್​ ಹರಿಹಾಯ್ದರು.
ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ರ್ನಿಬಂಧವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಆದರೂ ಒಂದು ತಿಂಗಳಲ್ಲಿ ಮತ್ತೆ 7 ಜನರ ಹತ್ಯೆಯಾಗಿದೆ. ಅಲ್ಲಿ ಕೇಂದ್ರ ಸರ್ಕಾರದ ನಿಯಂತ್ರಣ ತಪ್ಪಿದೆ. ಜನರ ದಾರಿ ತಪ್ಪಿಸುವ ಕೆಲಸವನ್ನು ಕೇಂದ್ರ ಮಾಡುತ್ತಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಲ್ಲಿನ ಹಿಂದುಗಳ ರಕ್ಷಣೆ ಮಾಡಬೇಕು. ನಿಮ್ಮಿಂದ ಆಗದಿದ್ದರೆ ಹೇಳಿ ನಾವು ಅಲ್ಲಿನ ಹಿಂದುಗಳ ರಕ್ಷಣೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೂ ಮುತಾಲಿಕ್​ ಎಚ್ಚರಿಕೆ ನೀಡಿದರು.
ಬೆಂಗಳೂರಲ್ಲಿ ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ: ಸಾವಿಗೂ ಮುನ್ನ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ Sorry… ಎಂದು ಬರೆದಿದ್ದೇಕೆ?

ಹೆತ್ತ ತಾಯಿಯ ಜುಟ್ಟು ಹಿಡಿದು ಕೊಟ್ಟು ಬಿಡುತ್ತೇವೆ… ಪಠ್ಯ ವಾಪಸ್​ ಅಭಿಯಾನಕ್ಕೆ ಟಾಂಗ್​ ಕೊಟ್ಟ ಎಸ್.ಎಲ್.ಭೈರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
