ಬೆಂಗಳೂರು:ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್​ ಅಧಿಕಾರಿ ಅಮೃತ್​ ಪೌಲ್​ ಅವರನ್ನ ಸಿಐಡಿ ಬಂಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿದೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಅಮೃತ್​ ಪೌಲ್​ರ ಬಂಧನ ಕೇವಲ ಕಣ್ಣೊರೆಸುವ ತಂತ್ರ. ಈ ಪ್ರಕರಣದಲ್ಲಿ ಸಚಿವರ ಪಾತ್ರ ಇದೆ, ದೊಡ್ಡವರ ಪಾತ್ರ ಇದೆ. ಎಲ್ಲವೂ ಬಹಿರಂಗವಾಗಲಿ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಹಾಲಿ ಸಿಎಂ ಮತ್ತು ಮಾಜಿ ಸಿಎಂ ಇದ್ದಾರೆ. ಬಿ.ವೈ.ವಿಜಯೇಂದ್ರ ಕೂಡ ಇದ್ದಾರೆ. ವಿಜಯೇಂದ್ರ ಅವರ ಹೆಸರನ್ನು ಬರೆದುಕೊಳ್ಳಿ. ಇವರ ಬಗ್ಗೆ ಮಾಹಿತಿ ಏನಿದೆ? ಎಂದು ಈಗ ಬಹಿರಂಗ ಪಡಿಸಲ್ಲ. ಎಲ್ಲಿ ಕೊಡಬೇಕೋ ಅಲ್ಲಿ‌ಯೇ ಕೊಡುತ್ತೇವೆ ಎಂದು ಕುತೂಹಲ ಮೂಡಿಸಿದ್ದಾರೆ.
ಎಸಿಬಿ ಇರುವುದು ಭ್ರಷ್ಟಾಚಾರ ಕಡಿಮೆ ಮಾಡಲಿ, ಭ್ರಷ್ಟರನ್ನು ಶಿಕ್ಷಿಸಲಿ, ಸಮಾಜದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಸೇವೆ ಸಿಗುವಂತೆ ಮಾಡಲೆಂದು. ಆದರೆ ಕುರಿಯನ್ನು ಕಾಯಿ ಎಂದರೆ ಸಂಬಳವೇ ಬೇಡ ಎಂದು ಹೇಳಿತಂತೆ ತೋಳ. ಹಾಗಾಗಿದೆ ಈಗಿನ ಸ್ಥಿತಿ. ಪಿಎಸ್​ಐ ಹುದ್ದೆ ಅಕ್ರಮದಲ್ಲಿ ವಿಜಯೇಂದ್ರ ಅವರ ಮೇಲೂ ಆರೋಪ ಇದೆ. ಅಶ್ವತ್ಥನಾರಾಯಣ್​ ಮೇಲೂ ಆರೋಪ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ದಯವಿಟ್ಟು ನನ್ನ ಮಗನಿಗೆ ಯಾರೂ ಸಾಲ ಕೊಡ್ಬೇಡಿ… ಸುಳ್ಳು ಹೇಳಿ ಜನರಿಗೆ ಮೋಸ ಮಾಡ್ತಿದ್ದಾನೆ: ಮಾಜಿ ಶಾಸಕ ಮನವಿ

ನನಗೆ ಮೊದಲು ಡಾನ್ಸ್ ಹವ್ಯಾಸವಿತ್ತು… ಆದರೀಗ ಬೇರೆಯವರನ್ನ ಕುಣಿಸುವೆ, ನಾನು ಕುಣಿಯಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
