ತುಮಕೂರು:ಪೆದ್ದನಹಳ್ಳಿಯಲ್ಲಿ ನಡೆದಿದ್ದ ದಲಿತ ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್​, ಸಂಗಮೇಶ್​, ಕೂಡಲಯ್ಯ ಸೇರಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗುಬ್ಬಿ ತಾಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿಯಲ್ಲಿ ಗುರುವಾರ ರಾತ್ರಿ ತೋಟದಲ್ಲಿ ಪಂಪ್​ಸೆಟ್​ ಕದಿಯಲು ಬಂದಿದ್ದರೆಂಬ ಶಂಕೆಯಲ್ಲಿ ರಾತ್ರೋರಾತ್ರಿ ಪಿ.ಎಂ.ಗಿರೀಶ್​ (30), ಮಂಚಲದೊರೆಯ ಗಿರೀಶ್​ (25) ಎಂಬುವರನ್ನು ಹಿಗ್ಗಾಮುಗ್ಗ ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ನಂದೀಶ್​ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಶಿರಾ ಡಿವೈಎಸ್ಪಿ ಕುಮಾರಪ್ಪ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಪ್ರಕರಣ ಬೆಳಕಿಗೆ ಬಂದ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೆದ್ದನಹಳ್ಳಿಯ ದಲಿತ ಯುವಕರಿಬ್ಬರ ಕೊಲೆ ನನ್ನ ಹೃದಯ ಕಲಕಿದೆ. ದಲಿತರ ಸಾವು ದಲಿತರೆಡೆಗಿನ ಬಿಜೆಪಿ ನಿರಾಸಕ್ತಿ ತೋರುತ್ತಿದೆ. ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅಸಮರ್ಥರು. ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ಹತ್ಯೇಗಿಡಾದ ಕುಟುಂಬದವರಿಗೆ ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಡ್​ ರೂಮಲ್ಲಿ ಎಲೆಕ್ಟ್ರಿಕ್​​ ಸ್ಕೂಟರ್​ನ ಬ್ಯಾಟರಿ ಸ್ಫೋಟ: ಪತಿ ಸಾವು, ಪತ್ನಿ ಸ್ಥಿತಿ ಚಿಂತಾಜನಕ… ಸ್ಕೂಟರ್​ ಖರೀದಿಸಿದ ಮರುದಿನವೇ ದುರಂತ

ತುಮಕೂರು ಎಸ್​ಪಿ ಸರ್​, ಪ್ಲೀಸ್​ ನೀವೆ ನಮ್ಗೆ ದಾರಿ ತೋರ್ಸಿ… ಮನೆ ಮಾಲೀಕನ ಸಾಲಕ್ಕೆ ಕಂಗಾಲಾದ 35 ಕುಟುಂಬ

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
