ಬೆಂಗಳೂರು:ಎರಡು ವಾರದಿಂದ ರಾಜ್ಯದಲ್ಲಿ ಆರ್ಭಟಿಸುತ್ತಿದ್ದ ಮಳೆ ಕೊನೆಗೂ ಬಿಡುವು ಕೊಟ್ಟಿದೆ. ಬುಧವಾರ ಕೆಲ ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಆ.11ರಂದು ಹೆಚ್ಚು ಮಳೆ ಬೀಳುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಆ.12ರಿಂದ ಕರಾವಳಿ, ಮಲೆನಾಡಿನಲ್ಲಿ ಮಳೆ ಪ್ರಮಾಣ ಇಳಿಕೆಯಾದರೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಈಗಾಗಲೇ ಕುಂಠಿತವಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಜೂ 1ರಿಂದ ಆ.10ರವರೆಗೆ ರಾಜ್ಯಾದ್ಯಂತ 553 ಮಿ.ಮೀ. ಮಳೆಯಾಗುವ ಬದಲು 702 ಮಿ.ಮೀ. ಮಳೆಯಾಗಿದ್ದು, ಶೇ.27 ವಾಡಿಕೆಗಿಂತ ಹೆಚ್ಚು ಬಿದ್ದಿದೆ.
ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಭಾಗಗಳಲ್ಲಿ ಬಿಸಿಲು ಜತೆಗೆ ಆಗಾಗ್ಗೆ ಸಾಧಾರಣ ಮಳೆ ಬೀಳಲಿದೆ. ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಮಳೆ ಕುಂಠಿತವಾಗಲಿದೆ ಎಂದು ಹವಾಮಾನ ವೈಪರಿತ್ಯ ವಿಜ್ಞಾನ ಡಾ.ಎಂ.ಬಿ.ರಾಜೇಗೌಡ ಹೇಳಿದ್ದಾರೆ.
ಆಷಾಢ ಹಿನ್ನೆಲೆ ತವರಿಗೆ ಬಂದಾಕೆ ದುರಂತ ಅಂತ್ಯ: ಆ ಒಂದು ತಿಂಗಳಲ್ಲಿ ಆಗಬಾರದ್ದೆಲ್ಲಾ ಆಗಿ ಹೋಯ್ತು…

ಚಾಮರಾಜನಗರ ಉಪನ್ಯಾಸಕಿ ದುರಂತ ಅಂತ್ಯ: ಗೊಂದಲದ ಗೂಡಿಗೆ ಸಿಲುಕಿದ ಚಂದನಾ… ಡೆತ್​ನೋಟಲ್ಲಿದೆ ಸಾವಿನ ಕಾರಣ

ತೇಜಸ್ವಿ ಸೂರ್ಯಗೆ ಒಳ್ಳೇ ಬುದ್ಧಿ ಬರಲೆಂದು ವಿಶೇಷ ಪೂಜೆ! ಪ್ರಸಾದ ತಲುಪಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
