ಮೈಸೂರು:ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.
ಸುತ್ತೂರು ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಮೈಸೂರಿಗೆ ರಮೇಶ್​ ಜಾರಕಿಹೊಳಿ ಬರುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿತ್ತು. ಸಚಿವ ಸ್ಥಾನಕ್ಕಾಗಿ ಅವರು ಬರುತ್ತಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್​, ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದದ್ದು ಅವರ ಪೂರ್ವಾಶ್ರಮದ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು. ಇಲ್ಲಿ ಯಾವ ರಾಜಕಾರಣವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನನ್ನಾಗಿ ಮಾಡುವ ಶಕ್ತಿ ನನ್ನಲ್ಲಿದೆ. ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ?ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು ಎಂದರು.ಇದನ್ನು ಓದಿರಿವಿಷ ಕುಡಿದು ಪ್ರಿಯಕರನ ಮಡಿಲಲ್ಲೇ ರಕ್ತಕಾರಿ ಪ್ರಾಣಬಿಟ್ಟ ಪ್ರೇಯಸಿ! ಇವರಿಬ್ಬರ ಕಥೆ ಭಯಾನಕ
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಆ ನಿರ್ಧಾರವನ್ನು ಕೈಬಿಟ್ಟಿರುವೆ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಪದೇಪದೆ ರಮೇಶ್ ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು. ನಾನೇಕೆ ಆ ಪಕ್ಷಕ್ಕೆ ಹೋಗಲಿ? ಬಿಜೆಪಿ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವೀಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನು ಹೇಳಿಕೊಂಡಿದ್ದೇನೆ ಎಂದ ರಮೇಶ್​, ಇನ್ನು 8 ರಿಂದ 10 ದಿನ ನನ್ನನ್ನು ಬಿಟ್ಟುಬಿಡಿ. ನಾನು ಅಲ್ಲಿಯವರೆಗೂ ಏನು ಮಾತಾಡಲ್ಲ ಎಂದು ಮಾಧ್ಯಮದವರಿಗೆ ಮನವಿ ಮಾಡಿದರು.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್​ ಹೇಳಿದರು.
ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಅಮ್ಮ ಸತ್ತ ದಿನ ವಿಷ ಕುಡಿದ, ಅಪ್ಪ ಸತ್ತಾಗ ರೈಲಿಂದ ಜಿಗಿದ… ಆದರೂ ಬದುಕಿದ್ದವ ನಿನ್ನೆ ದುರಂತ ಅಂತ್ಯಕಂಡ

ತಡರಾತ್ರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ! ಮುದ್ದಾದ ಯುವತಿ ಬಾಳಿಗೆ ಕೊಳ್ಳಿ ಇಟ್ಟಿದ್ಯಾರು?

.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
