ಬೆಂಗಳೂರು:ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನೂ ಇದೇ ರೀತಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈಗ ರೇಖಾರನ್ನು ಹತ್ಯೆ ಮಾಡಲಾಗಿದೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸಿ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸಂಸದ ಪಿ.ಸಿ. ಮೋಹನ್ ಅವರ ಶಿಷ್ಯೆಯಾಗಿದ್ದ ರೇಖಾ ಕದಿರೇಶ್ 2010 ಮತ್ತು 2015ರಲ್ಲಿ ಎರಡು ಭಾರಿ ಛಲವಾದಿಪಾಳ್ಯ ಕಾರ್ಪೋರೇಟ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇಂದು(ಗುರುವಾರ) ಬೆಳಗ್ಗೆ ರೇಖಾರ ತನ್ನ ಕಚೇರಿ ಬಳಿ ಕರೊನಾ ಹಿನ್ನೆಲೆ ಬಡವರಿಗೆ ಉಪಾಹಾರ ವಿತರಣೆ ಮಾಡುತ್ತಿದ್ದರು. ಈ ವೇಳೆ ಕಚೇರಿ ಬಳಿ ಬಂದ ಆಗಂತುಕರು ರೇಖಾ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ದಾಳಿ ಆಗುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳಲು ಕಚೇರಿಯ ಓಳಗೆ ಓಡಿ ಹೋದ ರೇಖಾರನ್ನು ಅಟ್ಟಾಡಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಕೆಂಪೇಗೌಡ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಬದುಕಲಿಲ್ಲ.
ಬಡವರಿಗೆ ಊಟ ಕೊಡುತ್ತಿರುವಾಗಲೇ ರೇಖಾ ಕದಿರೇಶ್​ನನ್ನು ಅಟ್ಟಾಡಿಸಿ ಕೊಂದ್ರು! ಇಲ್ಲಿದೆ ಭಯಾನಕ ರಹಸ್ಯ

ಮದುವೆ ಆದ ದಿನವೇ ವರನ ದುರಂತ ಸಾವು! ಮೊದಲ ರಾತ್ರಿ ಆ ಕೋಣೆಯಲ್ಲಿ ಆಗಿದ್ದೇನು?

ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − one =
Remember me
