ಉಡುಪಿ:ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಶಾಂಭವಿ ಲಾಡ್ಜ್​ನಲ್ಲಿ ಇದೀಗ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಗಳೂರು ಮೂಲದ ಮೆಡಿಕಲ್ ರೆಪ್ ಶರಣ್(33) ಮೃತ ದುರ್ದೈವಿ. ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್, ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಮಾಧ್ಯಮಗಳಿಗೆ ಏ.11ರಂದು ವಾಟ್ಸ್ಆ್ಯಪ್​ ಮೂಲಕ ಸಂದೇಶ ರವಾನಿಸಿದ್ದು. ಮರುದಿನ ಬೆಳಗ್ಗೆ ಉಡುಪಿಯ ಶಾಂಭವಿ ಲಾಡ್ಜ್​ನಲ್ಲಿ ಶವವಾಗಿ ಪತ್ತೆಯಾಗಿದ್ದರು.
ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದ ಸಂತೋಷ್ ಸಾವಿನ ಪ್ರಕರಣ ಕೊನೆಗೆ ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿದೆ. ಈ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಅತ್ತ ಸಂತೋಷ್ ಆತ್ಮಹತ್ಯೆ ಬಳಿಕ ಎರಡು ದಿನದ ಹಿಂದಷ್ಟೇ ಲಾಡ್ಜ್​ನ ಹೆಸರನ್ನು ಬದಲಾಯಿಸಿದ್ದ ಮಾಲೀಕರು ಹೋಮ ಹವನ ಮಾಡಿಸಿದ್ದರು. ಲಾಡ್ಜ್ ದ್ವಾರದ ದಿಕ್ಕು ಬದಲಾಯಿಸಲೂ ಯೋಜನೆ ಮಾಡಿದ್ದರು. ಅಷ್ಟರಲ್ಲಿ ಮತ್ತೊಬ್ಬ ವ್ಯಕ್ತಿ ಲಾಡ್ಜ್​ನಲ್ಲಿ ನೇಣುಬಿಗಿದುಕೊಂಡು ಸತ್ತಿದ್ದಾನೆ. ಇದು ಸಹಜವಾಗಿ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿದೆ.
ಗುತ್ತಿಗೆದಾರನ​ ಸಾವಿಗೂ ಮುನ್ನ ಲಾಡ್ಜ್​ಗೆ ಬಂದಿದ್ದನೇ ರಾಜೇಶ್​? ಯಾರೀತ? ಈ ಕೇಸ್​ಗೆ ಮತ್ತೊಂದು ತಿರುವು

80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
