ಹುಬ್ಬಳ್ಳಿ:ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ಕೊಂದ ಹಂತಕರ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ‘ಸರಳ ವಾಸ್ತು’ ಸಂಸ್ಥೆಯ ಮಾಜಿ ಉದ್ಯೋಗಿ ವನಜಾಕ್ಷಿಯನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಅಂದಹಾಗೇ ಚಂದ್ರಶೇಖರ ಗುರೂಜಿ ಅವರನ್ನು ಕೊಂದ ಕೊಲೆ ಆರೋಪಿಗಳಿಬ್ಬರ ಪೈಕಿ ಒಬ್ಬನ ಪತ್ನಿ ಈ ವನಜಾಕ್ಷಿ!
ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಕುಳಿತಿದ್ದ ಯುವಕರಿಬ್ಬರು, ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿ, ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸುವಂತೆ ನಟಿಸಿದ್ದು, ನೋಡನೋಡುತ್ತಿದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಹಿರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಹಿರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಭಯಾನಕ ದೃಶ್ಯ ನೋಡಿದರೆ ಗುರೂಜಿಯ ಪರಿಚಿತರಿಂದಲೇ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ಆರೋಪಿಗಳಾದ ಮಹಾಂತೇಶ ಶಿರೂರ ಮತ್ತು ಮಂಜುನಾಥ ಮರೆವಾಡ ಬಂಧನಕ್ಕೆ ಬಲೆ ಬೀಸಿದ್ದಾರೆ. ಕೊಲೆಗೆ ಏನು ಕಾರಣ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕೊಲೆ ಆರೋಪಿ ಮಹಾಂತೇಶ ಶಿರೂರ ಮತ್ತು ಈತನ ಪತ್ನಿ ವನಜಾಕ್ಷಿ ಇಬ್ಬರೂ ಚಂದ್ರಶೇಖರ ಗುರೂಜಿ ಅವರ ‘ಸರಳ ವಾಸ್ತು’ ಸಂಸ್ಥೆಯ ಮಾಜಿ ಎಂಪ್ಲಾಯಿಗಳು. ಸರಳ ವಾಸ್ತು ಸಂಸ್ಥೆಯಲ್ಲಿ 2019ರ ವರೆಗೆ ಕೆಲಸ ಮಾಡಿದ್ದಳು. ಈ ವೇಳೆ ಈಕೆಯ ಹೆಸರಿನಲ್ಲಿ ಚಂದ್ರಶೇಖರ ಗುರೂಜಿ ಅವರು ಕೆಲ ಆಸ್ತಿ ಖರೀದಿಸಿದ್ದರಂತೆ. ಗೋಕುಲ ರಸ್ತೆ ಬಳಿಯ ಅಪಾರ್ಟ್​ಮೆಂಟ್​ ಅನ್ನೂ ಈಕೆಯ ಹೆಸರಿಗೆ ಮಾಡಿದ್ದಾರೆ. ಆಸ್ತಿಯನ್ನು ವಾಪಸ್​ ಕೇಳಿದಾಗ ಗಲಾಟೆ ನಡೆದಿದೆ. ಆಸ್ತಿ ಜತೆಗೆ ಹಣಕಾಸಿನ ವಿಚಾರವಾಗಿಯೂ ಆಗಾಗ ಗಲಾಟೆ ಆಗುತ್ತಿತ್ತಂತೆ. ಇದೇ ವಿಚಾರಕ್ಕೆ ವನಜಾಕ್ಷಿ ಗಂಡ ಹಾಗೂ ಮತ್ತೊಬ್ಬ ಸೇರಿಕೊಂಡು ಗುರೂಜಿಯನ್ನ ಕೊಂದಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.
ಇನ್ನು ಚಂದ್ರಶೇಖರ ಗೂರುಜಿ ಅವರ ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಇದು ಅಂತ್ಯದ ಹೀನ ಕೃತ್ಯ. ಕೊಲೆಗಾರರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಲು ಎಸ್​ಪಿ ಜತೆ ಮಾತನಾಡಿದ್ದೇನೆ. ಹತ್ಯೆಗೆ ಏನು ಕಾರಣ ಅನ್ನೋದು ತನಿಖೆಯಿಂದ ಗೊತ್ತಾಗಲಿದೆ. ಈ ಕೃತ್ಯದಲ್ಲಿ ಯಾರೇ ಇದ್ದರೂ ಶಿಕ್ಷೆಯಾಗಲಿದೆ ಎಂದಿದ್ದಾರೆ.
ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಕೊಲೆ: ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ

ಚಂದ್ರಶೇಖರ ಗುರೂಜಿ ಕಗ್ಗೊಲೆ: ಬಾಗಲಕೋಟೆ ಮೂಲದವರಾದ್ರೂ ಮುಂಬೈನಲ್ಲೇ ಇರುತ್ತಿದ್ದ ಇವರ ಹಿನ್ನೆಲೆ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + five =
Remember me
