ಮಂಗಳೂರು:ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಯಾಟಲೈಟ್ ಫೋನ್ ಮತ್ತೊಮ್ಮೆ ರಿಂಗಣಿಸಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗ(ಐಎಸ್​ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ.
ಚಿಕ್ಕಮಗಳೂರಿನ ದಟ್ಟಾರಣ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ನಡುವಿನ ದಟ್ಟಾರಣ್ಯ, ಮಂಗಳೂರು ನಗರದ ಹೊರ ವಲಯದ ನಾಟೆಕಲ್​ ಮತ್ತು ಕುಳಾಯಿ ಬಳಿ ಮೇ 23ರಿಂದ 29ರ ನಡುವೆ ಸ್ಯಾಟಲೈಟ್​ ಫೋನ್​ ಸಿಗ್ನಲ್​ ಸಿಗ್ನಲ್​ ಪತ್ತೆ ಆಗಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಬಾರಿ ಸ್ಯಾಟಲೈಟ್​ ಫೋನ್​ ಸಿಗ್ನಲ್​ ಪತ್ತೆಯಾಗಿ ಆತಂಕ ಮೂಡಿಸಿದೆ. ಈ ಹಿಂದೆ ಸಿಗ್ನಲ್​ ಪತ್ತೆಯಾದ ಸಂದರ್ಭ ಗುಪ್ತಚರ ಇಲಾಖೆ ತನಿಖೆ ನಡೆಸಿತ್ತು. ನಿಷೇಧಿತ ಸ್ಯಾಟಲೈಟ್​ ಫೋನ್​ ಬಳಕೆ ಮಾಡಿರುವವರು ಯಾರು? ಎಂಬುದು ನಿಗೂಢವಾಗಿದೆ. ಈ ಕರೆಯ ಮೂಲ? ಯಾಕಾಗಿ ಕರೆ ಮಾಡುತ್ತಾರೆ? ಯಾರು ಕರೆ ಮಾಡುತ್ತಾರೆ? ಎಂಬುದು ಇದುವರೆಗೆ ಪತ್ತೆಯಾಗಿಲ್ಲ. ಭಾರತದಲ್ಲಿ ತುರಾಯ ಸ್ಯಾಟಲೈಟ್​ ಫೋನ್​ ನಿಷೇಧವಿದೆ.
2021ರ ಅಕ್ಟೋಬರನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕಡೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದ ಒಂದು ಕಡೆ ಸ್ಯಾಟಲೈಟ್ ಫೋನ್ ಆ್ಯಕ್ಟಿವ್​​ ಆಗಿತ್ತು. ರಾಜ್ಯದ ಕರಾವಳಿಯಲ್ಲಿ ಕೇಂದ್ರ ಗುಪ್ತಚರ ಸಂಸ್ಥೆಯ ಹೈ ಅಲರ್ಟ್ ಸೂಚನೆ ನಡುವೆಯೂ ಸ್ಯಾಟಲೈಟ್ ಫೋನ್​ ಆ್ಯಕ್ಟಿವ್​ ಆಗಿತ್ತು. ಇದೀಗ ಮತ್ತೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ನಾಲ್ಕು ಕಡೆಗಳಲ್ಲಿ ಸ್ಯಾಟಲೈಟ್​ ಫೋನ್​ ಸಿಗ್ನಲ್​ಗಳು ಪತ್ತೆಯಾಗಿವೆ.
ವೈ.ಸಂಪಂಗಿ ಅವರ ಹುಟ್ಟುಹಬ್ಬಕ್ಕೆ ಬಂದಿದ್ದವ ಮಾಜಿ ಶಾಸಕರ ತೋಟದ ಬಳಿ ಶವವಾಗಿ ಪತ್ತೆ!

ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
