ಬೆಂಗಳೂರು:ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲು ಹೆಚ್ಚಳಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೆ‌ ತರಲು ಸಚಿವ ಸಂಪುಟ ಸಭೆ ಅಸ್ತು ಎಂದಿದೆ.
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಎಸ್​ಸಿ ಮೀಸಲು ಪ್ರಮಾಣ ಶೇ.15 ರಿಂದ 17ಕ್ಕೆ ಹಾಗೂ ಎಸ್​ಟಿ ಮೀಸಲು ಪ್ರಮಾಣ ಶೇ.3 ರಿಂದ 7ಕ್ಕೆ ಏರಿಕೆಯಾಗಲಿದೆ.
ಸಭೆ ಬಳಿಕ ಬುಧವಾರ ಮಾತನಾಡಿ ಸಚಿವ ಮಾಧುಸ್ವಾಮಿ, ಮೀಸಲಾತಿ ಹೆಚ್ಚಳದಿಂದ ಈಗ ಶೇ.6 ಹೆಚ್ಚಳ ಆಗುತ್ತೆ. ಅದನ್ನು ಯಾವ ರೀತಿ ಹೊಂದಣಿಕೆ ಮಾಡಬೇಕು ಅಂತ ಚರ್ಚೆಯಾಗಿದೆ. ಸೆಡ್ಯೂಲ್ 9ರ ಒಳಗೆ ತರುವ ಯೋಚನೆ ಇತ್ತು. ಬೇರೆ ಬೇರೆ ಬೇಡಿಕೆಗಳು ಇರುವ ಹಿನ್ನೆಲೆ ನಾಗಮೋಹನ್ ದಾಸ್ ವರದಿ ಮಾತ್ರ ಅನುಷ್ಠಾನ ಮಾಡುತ್ತಿದ್ದೇವೆ. ವ್ಯಾಪಕವಾಗಿ ಚರ್ಚೆ ನಡೆಸಿದ ಬಳಿಕ ಸೆಡ್ಯೂಲ್ 9ಕ್ಕೆ ಸೇರಿಸಲು ತೀರ್ಮಾನ ‌ಮಾಡಿದ್ದೇವೆ ಎಂದರು.
ಮೀಸಲಾತಿಗೆ ಅರ್ಹವಾಗಿರುವ ಜಾತಿಗಳ ಸಂಖ್ಯೆ ಏರಿಕೆಯಾಗಿದೆ. ಪರಿಶಿಷ್ಟ ಜಾತಿಯಲ್ಲಿ 103 ಜಾತಿಗಳಿವೆ. ಪರಿಶಿಷ್ಟ ಪಂಗಡದಲ್ಲಿ 56 ಜಾತಿಗಳಿವೆ. ಅಗತ್ಯಕ್ಕನುಗುಣವಾಗಿ ಮೀಸಲಾತಿ ನೀಡಲು ಸರ್ಕಾರ ಚಿಂತನೆ ಮಾಡಿದೆ. ಮೀಸಲಾತಿ ಹೆಚ್ಚಳದ ಫಲ EWS ( Economically weaker Section) ಮಾದರಿಯಲ್ಲಿ ಇರಲಿದೆ. ಆದರೆ ಅದಕ್ಕೆ ಸಂವಿಧಾನಾತ್ಮಕ ರಕ್ಷಣೆ ಇರಲಿದೆ. ನಾವು ಸುಗ್ರೀವಾಜ್ಞೆ ತರುವಾಗ ಸಂವಿಧಾನದ ಪ್ರಕಾರವೇ ಕ್ರಮ ಜರುಗಿಸುತ್ತೇವೆ. ಕೋರ್ಟ್​ನಲ್ಲೂ ನಮಗೆ ರಕ್ಷಣೆ ಸಿಗುವ ವಿಶ್ವಾಸವಿದೆ ಎಂದು ಮಾಧುಸ್ವಾಮಿ ತಿಳಿಸಿದರು.
‘ಸ್ವಾಮಿ ಕೊರಗಜ್ಜ ಆದಿಸ್ಥಳ ಕುತ್ತಾರು’ ವೆಬ್​ಸೈಟ್ ಬಿಡುಗಡೆ

ಭಕ್ತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಹಾಸನಾಂಬೆ ದರ್ಶನ ಅವಧಿ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 20 =
Remember me
