ದೆಹಲಿ:ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದು, ಇವರ ಪ್ರತಿಸ್ಪರ್ಧಿ ಶಶಿ ತರೂರ್​ ಅವರು ಖರ್ಗೆಗೆ ಅಭಿನಂದನೆ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮೂಲಕ ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿ ಹೊತ್ತ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಟ್ವೀಟ್​ ಮಾಡಿರುವ ಶಶಿ ತರೂರ್​, ನನ್ನನ್ನೂ ಬೆಂಬಲಿಸಿದ 1000ಕ್ಕೂ ಸಹೋದ್ಯೋಗಿಗಳಿಗೆ ಧನ್ಯವಾದ ಎಂದಿದ್ದಾರೆ. ಖುದ್ದಾಗಿ ಖರ್ಗೆ ಅವರನ್ನ ಭೇಟಿ ಮಾಡಿ ಅಭಿನಂದಿಸುವೆ ಎಂದೂ ತಿಳಿಸಿದ್ದಾರೆ.
It is a great honour & a huge responsibility to be President of@INCIndia&I wish@Khargeji all success in that task. It was a privilege to have received the support of over a thousand colleagues,& to carry the hopes& aspirations of so many well-wishers of Congress across India.pic.twitter.com/NistXfQGN1
— Shashi Tharoor (@ShashiTharoor)October 19, 2022

ಕಾಂಗ್ರೆಸ್​ ಅಧ್ಯಕ್ಷೀಯ ಸ್ಥಾನಕ್ಕೆ ಅ.17ರಂದು ಚುನಾವಣೆ ನಡೆದಿತ್ತು. ಮತಾಧಿಕಾರ ಪಡೆದಿದ್ದ ಒಟ್ಟು 9100 ಮಂದಿ ಪೈಕಿ ಶೇ.96 ಪ್ರದೇಶ ಕಾಂಗ್ರೆಸ್​ ಮುಖಂಡರು ಮತದಾನ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್​ ನಡುವೆ ನಡೆದ ಹಣಾಹಣಿಯಲ್ಲಿ 6825 ಮತಗಳ ಅಂತರದಲ್ಲಿ ಖರ್ಗೆ ಗೆಲುವಿನ ನಗೆ ಬೀರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆಯುವ ಮೂಲಕ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರೆ, ಎದುರಾಳಿ ಅಭ್ಯರ್ಥಿ ಶಶಿ ತರೂರ್​ 1072 ಮತ ಪಡೆದು ಪರಾಭವಗೊಂಡರು. ಚಲಾಣೆಯಾದ ಮತಗಳ ಪೈಕಿ 400 ಮತಗಳು ತಿರಸ್ಕೃತಗೊಂಡಿವೆ.
ಎಐಸಿಸಿ ಅಧ್ಯಕ್ಷರಾಗಿ ಕರ್ನಾಟಕದಿಂದ ಆಯ್ಕೆಯಾದವರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 2ನೇಯವರು. 1968ರಲ್ಲಿ ಮಾಜಿ ಸಿಎಂ ಎಸ್​.ನಿಜಲಿಂಗಪ್ಪ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
