ಚಾಮರಾಜನಗರ:ಜಮಖಂಡಿ ಸಾರಿಗೆ ಬಸ್​ ಡಿಪೋ ಚಾಲಕ ಎನ್.ಕೆ. ಅವಟಿ ಸಾವು ಪ್ರಕರಣ ಸಂಬಂಧ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮತ್ತೊಂದು ರೈತ ಸಂಘಟನೆ ದೂರು ದಾಖಲಿಸಿದೆ.
ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲಸಕ್ಕೆ ಹಾಜರಾದ ಕೆಎಸ್​ಆರ್​ಟಿಸಿ ಬಸ್​ ಚಾಲಕ ಎನ್.ಕೆ. ಅವಟಿ (55) ಅವರಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿ ಶುಕ್ರವಾರ ಹತ್ಯೆ ಮಾಡಿದ್ದರು. ಈ ಸಂಬಂಧ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾ ರೈತಸಂಘ (ಒರಿಜಿನಲ್) ಅಧ್ಯಕ್ಷ ಕೆ.ಎಂ.ಮಾದಪ್ಪ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್​ರ ಪ್ರಚೋದನೆಯಿಂದಲೇ ಕಲ್ಲು ತೂರಾಟ ನಡೆದಿದೆ. ಚಾಲಕನ ಸಾವಿಗೆ ಕೋಡಿಹಳ್ಳಿ ಮತ್ತು ಅವರ ಆಪ್ತರೇ ಕಾರಣ. ಕೋಡಿಹಳ್ಳಿಯ ಸಂಚು- ಪಿತೂರಿಗಳಿಂದ ರೈತರು ಮೋಸ ಹೋಗಿದ್ದಾರೆ. ಇದೀಗ ಸಾರಿಗೆ ನೌಕರರೂ ಅವರ ವಿಷಜಾಲಕ್ಕೆ ಸಿಲುಕಿದ್ದಾರೆ. ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ನೀಡಿ ರೈತರಿಗೆ ತೊಂದರೆ ಕೊಡುವ ಕೆಲಸವನ್ನ ಮಾಡಲಾಗುತ್ತಿದೆ. ಸಣ್ಣ ರೈತರ ಹಣ್ಣು, ಹೂ, ತರಕಾರಿ, ರೇಷ್ಮೆಗೂಡು ಸಾಗಾಟಕ್ಕೆ ತೊಂದರೆಯಾಗಿದೆ ಎಂದು ಕಿಡಿಕಾರಿದರು.
ಶುಕ್ರವಾರ ವಿಜಯಪುರದಿಂದ ಜಮಖಂಡಿ ನಗರಕ್ಕೆ ಬಸ್ ಚಲಾಯಿಸಿಕೊಂಡು ಜಮಖಂಡಿ ಸಾರಿಗೆ ಘಟಕದ ಬಸ್​ ಚಾಲಕ ಎನ್.ಕೆ. ಅವಟಿ ಬರುತ್ತಿದ್ದರು. ಜಮಖಂಡಿಯ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಬಸ್​ ಅನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಬಸ್​ನತ್ತ ಕಲ್ಲು ತೂರಿದ್ದರು. ಬಸ್​ ಮುಂಭಾಗದ ಗಾಜನ್ನು ಒಡೆದುಕೊಂಡು ಒಳ ತೂರಿದ ಕಲ್ಲು ಚಾಲಕನ ಮೇಲೆ ಬಿದ್ದಿದ್ದು, ಕಲ್ಲಿನೇಟಿಗೆ ಚಾಲಕ ಬಲಿಯಾಗಿದ್ದರು.
ಸಾರಿಗೆ ಬಸ್​ ಚಾಲಕನ ಹತ್ಯೆ ಪಕ್ಕಾ ಪ್ಲಾನ್ಡ್! ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಆರೋಪಿ… ಬೆಚ್ಚಿಬೀಳಿಸುತ್ತೆ ನಿನ್ನೆ ನಡೆದ ಘಟನೆ

ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
