ಬಾಗಲಕೋಟೆ:ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್​ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿದ್ದು, ಚಾಲಕ ಮೃತಪಟ್ಟ ಘಟನೆ ಜಮಖಂಡಿಯಲ್ಲಿ ಸಂಭವಿಸಿದೆ.
ಜಮಖಂಡಿ ಸಾರಿಗೆ ಘಟಕದ ಬಸ್​ ಚಾಲಕ ಎನ್.ಕೆ. ಅವಟಿ (55) ಮೃತ ದುರ್ದೈವಿ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಬೀದಿಗಿಳಿಸುದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಬಸ್​ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ಸೂಚನೆಯಂತೆ ಎನ್.ಕೆ. ಅವಟಿ ಕೆಲಸಕ್ಕೆ ಹಾಜರಾಗಿದ್ದರು.
ಶುಕ್ರವಾರ ವಿಜಯಪುರದಿಂದ ಜಮಖಂಡಿ ನಗರಕ್ಕೆ ಬಸ್ ಚಲಾಯಿಸಿಕೊಂಡು ಎನ್.ಕೆ. ಅವಟಿ ಬರುತ್ತಿದ್ದರು. ಜಮಖಂಡಿಯ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಬಸ್​ ಅನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಬಸ್​ನತ್ತ ಕಲ್ಲು ತೂರಿದ್ದಾರೆ. ಬಸ್​ ಮುಂಭಾಗದ ಕಲ್ಲುಗಳು ಗಾಜನ್ನು ಒಡೆದುಕೊಂಡು ಒಳ ತೂರಿ ಚಾಲಕನ ಮೇಲೆ ಬಿದ್ದಿದೆ. ಕಲ್ಲಿನೇಟಿಗೆ ಚಾಲಕ ಸ್ಥಿತಿ ಗಂಭೀರವಾಗಿತ್ತು. ಕುತ್ತಿಗೆಗೆ ಕಲ್ಲು ಬೀಳುತ್ತಿದ್ದಂತೆ ತಕ್ಷಣವೇ ವಾಹನ ನಿಲ್ಲಿಸಿದ ಚಾಲಕ ಅರೆ ಪ್ರಜ್ಞಾವಸ್ಥೆಗೆ ತಲುಪಿದ್ದರು. ದಿಢೀರ್​ ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡರು.
ಕೂಡಲೇ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಕರ್ತವ್ಯಕ್ಕೆ ಹಾಜರಾಗಿ ಸಾವಿಗೀಡಾದ ಚಾಲಕನ ಬಗ್ಗೆ ಪ್ರಯಾಣಿಕರು ಮರುಕ ವ್ಯಕ್ತಪಡಿಸಿದರು. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 2 =
Remember me
