ಮಂಡ್ಯ:ಪ್ರತಿ ಟನ್ ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವಂತೆ ಹಾಗೂ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು-ಮೈಸೂರು, ಕುಣಿಗಲ್​-ಮೈಸೂರು ರಸ್ತೆ ಬಂದ್​ ಮಾಡಿ ನಗರದ ವಿವಿಧೆಡೆ ರೈತ ಸಂಘ ಪ್ರತಿಭಟನೆ ನಡೆಸುತ್ತಿದ್ದು, ಮಂಡ್ಯ ನಗರದ ವಿ.ಸಿ.ಫಾರ್ಮ್ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿ ಟನ್ ಕಬ್ಬಿಗೆ 4,500 ರೂ. ನಿಗದಿ ಮಾಡಬೇಕು ಎಂದು ರೈತ ಸಂಘ ಮನವಿ ಮಾಡಿತ್ತು. ದಸರಾ ಹಬ್ಬದೊಳಗೆ ದರ ಘೋಷಣೆಗೆ ಸರ್ಕಾರಕ್ಕೆ ಗಡುವು ನೀಡಿತ್ತು. ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಹಸು, ಕುರಿ, ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳೊಂದಿಗೆ ರಸ್ತೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ವಿಶ್ವವಿಖ್ಯಾತ ಮೈಸೂರು ದಸರಾಗೆ ತೆರಳುತ್ತಿರುವವರಿಗೂ ಪ್ರತಿಭಟನೆ ಬಿಸಿ ತಟ್ಟಿದೆ.

ವಿ.ಸಿ.ಫಾರ್ಮ್ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಡಿವೈಎಸ್ಪಿ ಶಿವಮೂರ್ತಿ ನೇತೃತ್ವದಲ್ಲಿ ವಶಕ್ಕೆ ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದರೆ. ಸ್ಥಳದಲ್ಲಿದ್ದ ಇನ್ನಷ್ಟು ರೈತರ ಗುಂಪನ್ನು ಚದುರಿಸಿ ವಾಹನಗಳ ಸಂಚಾರ ಅನುವುಮಾಡಿಕೊಡಿತ್ತಿದ್ದಾರೆ. ಈ ವೇಳೆ ಆಕ್ರೋಶ ಹೊರ ಹಾಕಿದ ರೈತರು, ಸಂಬಳ ಪಡೆಯುವ ಅಧಿಕಾರಿಗಳು ಮತ್ತು ಲಂಚ ಪಡೆಯುವ ಜನಪ್ರತಿನಿಧಿಗಳಿಗೆ ರೈತರ ಕಷ್ಟ ಏನು ಗೊತ್ತಾಗುತ್ತೆ? ರೈತರ ಪರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರು ಮತ್ತು ಕುಣಿಗಲ್ ಕಡೆಯಿಂದ ಬರುವ ವಾಹನಗಳಿಗೆ ಸಂಪರ್ಕ ಕಲ್ಪಿಸುವ ವೃತ್ತದಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ…

ದಸರಾ ದಿನವೇ‌ ಸರ್ಕಾರಕ್ಕೆ ಶಾಕ್​ ಕೊಟ್ಟ ರೈತ ಸಂಘ: ಮೈಸೂರಿಗೆ ಸಂಪರ್ಕ ಕಲ್ಪಿಸೋ 8 ಕಡೆ ಹೆದ್ದಾರಿ ಬಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
