ಬೆಂಗಳೂರು:ರಾಜಧಾನಿ ಬೆಂಗಳೂರು ಮಹಾನಗರ ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆ, ಗಲ್ಲಿಗಳ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಕರೊನಾ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕರೊನಾ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಲು ಅಸ್ತು ಎಂದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಹಿಂದಿನ ವರ್ಷಗಳಂತೆಯೇ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್​ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಕೂಡಿಸುವಂತಿಲ್ಲ ಎಂದರು.
ಸಾಂಕ್ರಾಮಿಕ ರೋಗ ನಿಯಂತ್ರಿಸುವುದಕ್ಕಾಗಿ ಎರಡು ವರ್ಷ ನಿರ್ಬಂಧ ವಿಧಿಸಲಾಗಿತ್ತು. ಈ ಕ್ರಮದಿಂದ ಹಿಂದುಪರ ಸಂಘಟನೆಗಳು ಮತ್ತು ಸಮಿತಿಗಳಿಗೆ ನೋವಾಗಿದ್ದು, ಅದಕ್ಕಾಗಿ ಕ್ಷಮೆ ಕೇಳುತ್ತೇವೆ ಎಂದರು.
ಬೆಂಗಳೂರಿನಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆಗೆ ಕೆರೆ, ಹೊಂಡಗಳ ವ್ಯವಸ್ಥೆ, ಸಾಗುವ ಮಾರ್ಗ ಇತ್ಯಾದಿ ವ್ಯವಸ್ಥೆಗಳ ಬಗ್ಗೆ ಬಿಬಿಎಂಪಿ ಮುಖೇನ ಶೀಘ್ರ ಮಾಹಿತಿ ನೀಡಲಾಗುತ್ತದೆ ಎಂದು ಆರ್.ಅಶೋಕ್​ ತಿಳಿಸಿದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​

ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
