ಹೊಸಕೋಟೆ:ಹಿಂದಿಗಾನಹಳ್ಳಿಯ ಆಂಜನೇಯ ಸ್ವಾಮಿ ದೇಗುಲದಲ್ಲಿ ನಿಧಿ ಶೋಧಕ್ಕೆ ಹೋದ 8 ಜನರ ಪೈಕಿ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಂ.ಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಯ ಹಿಂದಿಗಾನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಿಧಿ ಇದೆಯೆಂದು ಅದನ್ನು ಹುಡುಕಿ ದೋಚಿಕೊಂಡು ಹೋಗಲೆಂದು ಸಂಚು ರೂಪಿಸಿದ್ದ 8 ಜನರ ತಂಡ ಗುರುವಾರ ತಡರಾತ್ರಿ ಬಂದಿತ್ತು. ನಿಧಿಗಾಗಿ ದೇಗುಲದ ನೆಲವನ್ನು ಅಗೆಯುತ್ತಿದ್ದ ದುಷ್ಕರ್ಮಿಗಳ ಮೇಲೆ ಕಲ್ಲಿನ ಮಂಟಪ ಕುಸಿದಿದ್ದು, ಹಿಂದಿಗನಾಳ ಗ್ರಾಮದ ಸುರೇಶ್ (22) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿರಿಬೆಂಗಳೂರಲ್ಲಿ ವಿದೇಶಿಗರಿದ್ದ 35 ಮನೆಗಳ ಮೇಲೆ ರಾತ್ರೋರಾತ್ರಿ ಸಿಸಿಬಿ ರೇಡ್​… ಬೆಚ್ಚಿ ಬೀಳಿಸುತ್ತೆ ಅಲ್ಲಿನ ಅಕ್ರಮ
ನಿಧಿ ಶೋಧನೆ ವೇಳೆ ಮಂಟಪ ಕುಸಿದು ಸುರೇಶ್​​ ಮೃತಪಟ್ಟು, ಕೆಂಬಳಿಗಾನಹಳ್ಳಿ ಗ್ರಾಮದ ಶ್ರೀನಿವಾಸ್, ಮಂಜುನಾಥ್ ಮತ್ತು ಯಲಹಂಕದ ಸಬಾಸ್ಟಿನ್ ಗಂಭೀರ ಗಾಯಗೊಂಡಿದ್ದಾರೆ. ಉಳಿದ ನಾಲ್ವರು ಪೊಲೀಸರ ಕೈಗೆ ಸಿಕ್ಕಿ ಬೀಳುವ ಭೀತಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ನಿಧಿ ಆಸೆಗೆ ಹೋಗಿ ಪ್ರಾಣಬಿಟ್ಟ ಘಟನೆ ಇಡೀ ಗ್ರಾಮವನ್ನೇ ಬಿಚ್ಚಿಬೀಳಿಸಿದ್ದು, ಮಾಡಬಾರದ್ದನ್ನು ಮಾಡಲು ಹೋದರೆ ಆ ದೇವರು ಕೊಡೋ ಶಿಕ್ಷೆ ಭಯಾನಕ ಎಂದೆಲ್ಲ ಜನರು ಚರ್ಚಿಸುತ್ತಿದ್ದಾರೆ.
ಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
