ಬೆಂಗಳೂರು:ಕರೊನಾ ಕಾರಣದಿಂದ ಪ್ರಸ್ತುತ ನಡೆಯುತ್ತಿರುವ ಪರೀಕ್ಷೆಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಳ್ಳುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯಲಿವೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೊಮಾ ಸೇರಿ ಉನ್ನತ ಶಿಕ್ಷಣ ವ್ಯಾಪ್ತಿಯ ಪರೀಕ್ಷೆಗಳು ಯಥವತ್ತಾಗಿ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.ಇದನ್ನೂ ಓದಿರಿರಾತ್ರಿ 10ರ ಬಳಿಕ ಜನರು ಬೇಕಾಬಿಟ್ಟಿ ಓಡಾಡುವಂತಿಲ್ಲ: ಕಮಲ್ ಪಂತ್
ಬೇಸಿಗೆ ರಜೆ ಇಲ್ಲ: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಪರೀಕ್ಷೆಗಳು ಮುಗಿದ ಮಳಿಕ ಬೇಸಿಗೆ ರಜೆ ಇರುವುದಿಲ್ಲ. ತಕ್ಷಣ ತರಗತಿಗಳು ಶುರುವಾಗಲಿವೆ. ಇದರಲ್ಲಿ ಆಫ್‌ಲೈನ್ ಮತ್ತು ಆನ್‌ಲೈನ್ ತರಗತಿಗಳಿವೆ. ಮೊದಲು ಆನ್‌ಲೈನ್ ತರಗತಿ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಶ್ವತ್ಥನಾರಾಯಣ ಹೇಳಿದರು.
ಕೋವಿಡ್ ಮಾರ್ಗಸೂಚಿ ಅನ್ವಯ ಕಾಲೇಜಿನಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು. ಕೊಠಡಿಗಳಲ್ಲಿ ಸ್ಯಾನಿಟೈಷನ್ ಬಳಕೆ, ವೈಯಕ್ತಿಕ ಸ್ವಚ್ಛತೆ, ಕೋವಿಡ್ ಪರೀಕ್ಷೆ, ಸಾಮಾಜಿಕ ಅಂತರ ಕಾಯ್ದಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದರು.ಇದನ್ನೂ ಓದಿರಿದೇವರ ಪೂಜೆ ಮಾಡಿದ್ರೆ ಕರೊನಾ ನಿಯಂತ್ರಣಕ್ಕೆ ಬರುತ್ತಾ? ಕಥೆ ಹೇಳಿದ ರೋಹಿಣಿ ಸಿಂಧೂರಿ
1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್: ಕರೊನಾ ಹಿನ್ನೆಲೆಯಲ್ಲಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು (ಎಲ್‌ಎಂಎಸ್) ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಅದಕ್ಕೆ ನೆರವಾಗುವಂತೆ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌ಲೆಟ್ ಪಿಸಿಗಳನ್ನು ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು. ತರಗತಿ ಕೊಠಡಿಗಳನ್ನು ಸ್ಟುಡಿಯೋಗಳಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್ ಕ್ಲಾಸ್ ಕೊಠಡಿಗಳಾಗಿವೆ. ಹಾಗಾಗಿ, ಮನೆಯಿಂದಲೇ ವ್ಯಾಸಂಗ ಮಾಡಬಹುದು ಎಂದು ಡಿಸಿಎಂ ಹೇಳಿದರು.
ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 6 =
Remember me
