ಮಂಗಳೂರು:ತಂದೆಯೇ ತನ್ನ ಮೂವರು ಮಕ್ಕಳು ಬಾವಿಗೆ ನೂಕಿ ಕೊಂದ ಧಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಪದ್ಮನೂರು ಬಳಿ ಗುರುವಾರ ಸಂಜೆ ಸಂಭವಿಸಿದೆ.
ರಶ್ಮಿತಾ(14), ಉದಯ್(11) ಮತ್ತು ದಕ್ಷಿತ್(4) ಮೃತ ಮಕ್ಕಳು. ತಂದೆ ವಿಜೇಶ್ ಶೆಟ್ಟಿಗಾರ್ ಆರೋಪಿ. ಬೆಳಗ್ಗೆ ಶಾಲೆಗೆ ಹೋಗಿದ್ದ ಮಕ್ಕಳು ಮನೆಗೆ ಬರುತ್ತಿದ್ದಂತೆ, ಅವರನ್ನು ಕರೆದೊಯ್ದು ಬಾವಿಗೆ ನೂಕಿ ಕೊಂದಿದ್ದಾನೆ. ಬಳಿಕ ಮನೆಗೆ ಬಂದಿದ್ದಾನೆ. ಮಕ್ಕಳು ಎಲ್ಲಿ? ಎಂದು ಪತ್ನಿ ಲಕ್ಷ್ಮೀ ಕೇಳಿದಾಗ ಎಲ್ಲೋ ಅವಿತುಕೊಂಡು ಆಟವಾಡುತ್ತಿರಬೇಕು ಎಂದು ಸುಳ್ಳು ಹೇಳಿದ್ದಾನೆ.
ಅನುಮಾನಗೊಂಡ ಪತ್ನಿ, ಸಮೀಪದ ಬಾವಿ ಬಳಿಗೆ ಬಂದು ನೋಡುತ್ತಿದ್ದಂತೆ ಆಕೆಯನ್ನೂ ಬಾವಿಗೆ ತಳ್ಳಲು ಯತ್ನಿಸಿದ್ದಾನೆ. ನೀನು ಸಾಯಬೇಕು, ನಾನು ಸಾಯುವೆ ಎನ್ನುತ್ತಾ ಆಕೆಯನ್ನೂ ನೂಕಿ, ಬಾವಿಗೆ ತಾನೂ ಹಾರಿದ್ದಾನೆ. ಅಷ್ಟರಲ್ಲಿ ಸ್ಥಳಕ್ಕೆ ಬಂದ ಸ್ಥಳೀಯರು ಗಂಡ-ಹೆಂಡತಿ ಇಬ್ಬರನ್ನೂ ರಕ್ಷಿಸಿದ್ದಾರೆ. ಮಕ್ಕಳು ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ವಿಜೇಶ್ ಶೆಟ್ಟಿಗಾರ್ ಇಡೀ ಕುಟುಂಬವನ್ನೇ ಕೊಂದು ಸಾಯಲು ಯತ್ನಿಸಿದ್ದು ಏಕೆ? ಎಂಬುದು ಇನ್ನೂ ಗೊತ್ತಾಗಿಲ್ಲ. ಅದ್ಹೇನೆ ಇರಲಿ, ಆಟವಾಡುತ್ತಾ ಓದಿಕೊಂಡಿರಬೇಕಿದ್ದ ಪುಟ್ಟ ಮಕ್ಕಳು ತಂದೆಯಿಂದಲೇ ದುರಂತ ಅಂತ್ಯಕಂಡದ್ದು ಮಾತ್ರ ವಿಪರ್ಯಾಸ.
ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ! ಇಂಥಾ ಸ್ಥಿತಿ ಯಾರಿಗೂ ಬೇಡ…

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 16 =
Remember me
