ತುಮಕೂರು:ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿದ ಎನ್​​ಎಸ್​ಯುಐ ಪಾಪಿಗಳು ಆರ್​ಎಸ್​ಎಸ್​ ಸಂಘದ ಚಡ್ಡಿ ಸುಟ್ಟು ಹಾಕಿದ್ದಾರೆ. ಇಂತಹ ಪಾಪಿಗಳಿಗೆ ಕಂಡಲ್ಲಿ ಗುಂಡಿಕ್ಕಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಸೊಗಡು ಶಿವಣ್ಣ, ಶಿಕ್ಷಣ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಭಯ ಹುಟ್ಟಿಸಿ ವಿಕೃತಿ ಮೆರೆದವರ ವಿರುದ್ಧ ಉತ್ತರ ಪ್ರದೇಶದ ಸಿಎಂ ಯೋಗಿ ಮಾದರಿಯಲ್ಲಿ ಉಗ್ರ ಕ್ರಮ ಕೈಗೊಳ್ಳಬೇಕು. ಇಂತಹವರಿಗೆ ಕಂಡಲ್ಲಿ ಗುಂಡು ಹೊಡೆಯಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಕದಡಲಿದೆ. ಸಚಿವರ ಮನೆಯಲ್ಲಿ ದಾಂಧಲೆ ನಡೆದ ಸಂದರ್ಭದಲ್ಲಿ ಅವರ ಪುತ್ರ, ಸೊಸೆ ಇದ್ದರು. ಏಕಾಏಕಿ ಘಟನೆಯಿಂದ ಮಾನಸಿಕವಾಗಿ ಆ ಹೆಣ್ಣು ಮಗಳು ಆಘಾತಕ್ಕೊಳಗಾಗಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗಲಭೆ ಬಗ್ಗೆ ಈವರೆಗೆ ಹೇಳಿಕೆ ನೀಡಿಲ್ಲ ಏಕೆ? ಎಂದು ಆಕ್ರೋಶ ಹೊರಹಾಕಿದರು.

ಅಲಿ ರೆಹಮತ್ ಖಾನ್ ಅಲಿಯಾಸ್ ಪೈಲ್ವಾನ್, ಮಹಮ್ಮದ್ ರಜಾಕ್, ಅಮರುಲ್ಲಾಖಾನ್, ಮಹಮ್ಮದ್ ಬೇಗ್, ಸಂಪತ್, ಮಧು, ಅಮೃತಕುಮಾರ್, ರೆಹಮಾನ್,‌ ಲಕ್ಷ್ಮೀಶ್, ಕೀರ್ತಿ ಬೆಂಗಳೂರು ಇವರೆಲ್ಲಾ ಕಾಂಗ್ರೆಸ್ NSUI ಕಾರ್ಯಕರ್ತರು. ಮನೆಗೆ ಬೆಂಕಿ ಇಡಲು ಬಂದಿದ್ದರು. ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿನ ಘಟನೆಯಂತೆ ಇದು ಭೀತಿ ಹುಟ್ಟಿಸುವುದಾಗಿದೆ‌. ಇಂತಹ ಪಾಪಿಗಳಿಗೆ ಉಗ್ರ ಶಿಕ್ಷೆ ಆಗಬೇಕು. ಇವರು 4 ಕಾರಲ್ಲಿ ಬಂದಿದ್ದರು. ಇನ್ನೆರಡು ಕಾರು ಎಲ್ಲಿವೆ? ಆ ಕಾರುಗಳನ್ನು ಈವರೆಗೆ ಸೀಜ್ ಮಾಡಿಲ್ಲ. ಇವರ ವಿರುದ್ಧ ಉತ್ತರ ಪ್ರದೇಶದ ಯೋಗಿ ರೀತಿಯಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಸೊಗಡು ಶಿವಣ್ಣ ಗುಡುಗಿದರು.
ಗಂಡನನ್ನು ಬಿಟ್ಟು ಬಾ… ಹಾಸನ ಯುವಕನ ಕಾಟಕ್ಕೆ ಶಿವಮೊಗ್ಗದ ವಿವಾಹಿತೆ ಕಂಗಾಲು!

ಜೂ.5ರಂದು ಬೆಂಗಳೂರಲ್ಲಿ ಬೃಹತ್​ ಸೈಕಲ್​ ಜಾಥಾ: ವಿಶ್ವ ಪರಿಸರ-ಬೈಸಿಕಲ್​ ದಿನದ ಪ್ರಯುಕ್ತ BNMIT ಆಯೋಜನೆ

Sign in to your account
Please enter an answer in digits:16 + 2 =
Remember me
