ಬೆಂಗಳೂರು:ಶಾಲಾ-ಕಾಲೇಜುಗಳಿಗೆ ಹಿಜಾಬ್​ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ ಐವರು ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ್ದಾರೆ. ಹಿಜಾಬ್​ ಇಲ್ಲದೆ ಕಾಲೇಜಿಗೆ ಹೋಗೋದಿಲ್ಲ. ಕುರಾನ್​ ಹೇಳಿದ್ದೇ ನಮಗೆ ಫೈನಲ್​. ನಮ್ಮ ಹಕ್ಕು ಪಡೆಯೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದಿದ್ದಾರೆ.
ಹಿಜಾಬ್ ಪರ ಹೋರಾಟಗಾರ್ತಿ ಆಲಿಯಾ ಅಸಾದಿ ಮಾತನಾಡಿ, ನಮಗೆ ಕೋರ್ಟ್​ನಲ್ಲಿ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ನಮ್ಮ ವಿರುದ್ಧ ತೀರ್ಪು ಬಂದಿದೆ. ಆದರೆ ನಾವು ಯಾವುದೇ ಕಾರಣಕ್ಕೂ ಹಿಜಾಬ್​ ಇಲ್ಲದೆ ಕಾಲೇಜಿಗೆ ಬರಲ್ಲ. ಹೆಣ್ಣುಮುಕ್ಕಳು ಮನೆಯಿಂದ ಹೊರಬರುವಾಗ ತಲೆ-ಎದೆಭಾಗವನ್ನು ಮುಚ್ಚಬೇಕು ಎಂದು ಕುರಾನ್​ನಲ್ಲಿ ಬರೆದಿದೆ. ಕುರಾನ್​ ಹೇಳಿದ ಮೇಲೆ ನಮಗೆ ಅದೇ ಫೈನಲ್, ಅದೇ ನಮ್ಮ ಸಂವಿಧಾನ. ನಮ್ಮ ಹಕ್ಕು ಪಡೆಯೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ. ನಮಗೆ ಹಿಜಾಬ್​ ಅತ್ಯವಶ್ಯಕ. ಅದಕ್ಕಾಗಿಯೇ ಈ ಹೋರಾಟ. ರಾಜಕೀಯ ಉದ್ದೇಶಕ್ಕಾಗಿ ಇದನ್ನು ದೊಡ್ಡದು ಮಾಡಲಾಯಿತು. ಕಾಲೇಜಿನ ಕಾಂಪೌಂಡಿನ ಒಳಗೇ ಈ ಸಮಸ್ಯೆಯನ್ನ ಬಗೆಹರಿಸಬಹುದಿತ್ತು ಎಂದರು.
ಕಾಲೇಜಿಗೆ ಗೈರಾಗಿದ್ದರೂ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೇವೆ. ನಾವು ಹಿಜಾಬ್​ ತೆಗೆಯುವುದಿಲ್ಲ, ನಮಗೆ ಶಿಕ್ಷಣ ಕೂಡ ಮುಖ್ಯ. ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ. ಒತ್ತಡ ಇದ್ದದ್ದಕ್ಕೆ ಇಂದು ಹಿಜಾಬ್ ವಿರುದ್ಧ ತೀರ್ಪು ಬಂದಿದೆ. ಇದು ಅಸಂವಿಧಾನಿಕವಾದ ತೀರ್ಪು ಎಂದು ಆಲಿಯಾ ಅಸಾದಿ ಆರೋಪಿಸಿದರು.
ವಿದ್ಯಾರ್ಥಿನಿ ಅಲ್ಮಾಸ್ ಮಾತನಾಡಿ, ನಮಗಿಲ್ಲಿ ನ್ಯಾಯ ಇಲ್ಲ ಅನ್ನಿಸುತ್ತಿದೆ. ಎರಡು ತಿಂಗಳು ಸಮಸ್ಯೆ ಅನುಭವಿಸಿದೆವು. ನಮ್ಮನ್ನು ಬೇರೆಯೇ ರೀತಿಯಲ್ಲಿ ನೋಡುತ್ತಿದ್ದಾರೆ. ನಾವು ಡಿಸಿ, ಡಿಡಿಪಿಐ ಭೇಟಿ ಮಾಡಿದರೂ ನ್ಯಾಯ ಸಿಗಲಿಲ್ಲ. ನಮಗೆ ನಮ್ಮ ನ್ಯಾಯ ಸಿಗಲಿಲ್ಲ. ನಾವು ಜಾತ್ಯಾತೀತ ದೇಶದಲ್ಲಿದ್ದೇವೆ. ಎಲ್ಲಾ ಧರ್ಮಕ್ಕೆ ಎಲ್ಲರೂ ಗೌರವ ಕೊಡಬೇಕು ಎಂದರು.
ಹಿಜಾಬ್​ ಬ್ಯಾನ್​: ಸಿಜೆ ಅವರು ಓದಿದ 129 ಪುಟಗಳ ತೀರ್ಪಿನ ಪ್ರಮುಖ ಅಂಶ ಇಲ್ಲಿದೆ

ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nine =
Remember me
