ಬೆಂಗಳೂರು:ರಾಜ್ಯದಲ್ಲಿ ನಾಳೆಯಿಂದಲೇ ವೀಕೆಂಡ್​ ಕರ್ಫ್ಯೂ ರದ್ದಾಗಲಿದ್ದು, ಎಂದಿನಂತೆ ನೈಟ್​ ಕರ್ಫ್ಯೂ ಮುಂದುವರಿಯಲಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಮಧ್ಯಾಹ್ನ ಎರಡೂವರೆ ತಾಸು ನಡೆದ ಸಭೆಯಲ್ಲಿ ಕರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಮತ್ತು ಇನ್ನಿತರ ಕ್ರಮ ತೆಗೆದುಕೊಳ್ಳುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್​. ಅಶೋಕ್​, ಕರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ವೀಕೆಂಡ್​ ಕರ್ಫ್ಯೂ ರದ್ದು ಮಾಡಲಾಗಿದೆ. ದಯವಿಟ್ಟು ಪ್ರತಿಯೊಬ್ಬರೂ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಿ. ಸಮಸ್ಯೆ ಉಲ್ಬಣಸಿದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ವೀಕೆಂಡ್​ ಕರ್ಫ್ಯೂ ಜತೆಗೆ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ ಎಂದು ಮನವಿ ಮಾಡಿದರು.
ಸಭೆಯಲ್ಲಿ 12 ತಜ್ಞರು ಪಾಲ್ಗೊಂಡಿದ್ದರು. ಅವರ ಅಭಿಪ್ರಾಯದ ಜತೆಗೆ ಸಚಿವರು, ಇಲಾಖಾವಾರು ಮಾಹಿತಿ ಸಂಗ್ರಹಿಸಿದ ಸಿಎಂ ವಾರಾಂತ್ಯದ ಕರ್ಫ್ಯೂ ರದ್ದು ಮಾಡಿದ್ದಾರೆ. ಆಸ್ಪತ್ರೆಗೆ ಸೇರುವವರ ಪ್ರಮಾಣ ಶೇ.5ಕ್ಕಿಂತ ಹೆಚ್ಚಾದರೆ ಮತ್ತೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುತ್ತೆ ಎಂದು ಅಶೋಕ್​ ಎಚ್ಚರಿಸಿದರು. ರಾತ್ರಿ ಕರ್ಫ್ಯೂ ಸೇರಿದಂತೆ ಉಳಿದ ನಿರ್ಬಂಧಗಳು ಮುಂದುವರಿಕೆ ಆಗಲಿವೆ. ಧರಣಿ, ಪ್ರತಿಭಟನೆ, ರ್ಯಾಲಿ ನಡೆಸುವಂತಿಲ್ಲ. ಇದು ಇಡೀ ಕರ್ನಾಟಕಕ್ಕೆ ಅನ್ವಯ ಎಂದರು.
ಬೆಂಗಳೂರಲ್ಲಿ ಜ.29ರ ವರೆಗೂ ಶಾಲಾ-ಕಾಲೇಜು ಓಪನ್​ ಆಗಲ್ಲ: ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್​ ಹೇಳಿಕೆ

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 3 =
Remember me
