ಮೈಸೂರು:ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಕ್ರೂರಿಯೊಬ್ಬ ತನ್ನ ಪತ್ನಿಯ ರುಂಡ-ಮುಂಡ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ.
ಚೆಟ್ಟನಹಳ್ಳಿಯ ದೇವರಾಜ್ ಅವರ 2ನೇ ಪತ್ನಿ ಪುಟ್ಟಮ್ಮ(40) ಕೊಲೆಯಾದ ದುರ್ದೈವಿ. ಪತ್ನಿಯ ಶೀಲ ಶಂಕಿಸಿ ನಿತ್ಯ ಕ್ಯಾತೆ ತೆಗೆಯುತ್ತಿದ್ದ ದೇವರಾಜ್​, 21 ವರ್ಷ ತನ್ನೊಂದಿಗೆ ಸಂಸಾರ ನಡೆಸಿದ್ದ ಪತ್ನಿಯನ್ನೇ ಅಮಾನುಷವಾಗಿ ಕೊಂದಿದ್ದಾನೆ. ಮೊದಲ ಹೆಂಡತಿಯನ್ನೂ ಕೊಲೆ ಮಾಡಲು ಯತ್ನಿಸಿದ್ದ ದೇವರಾಜ್ ಜೈಲುವಾಸ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾದ ದೇವರಾಜ್, 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು ಎರಡನೇ ವಿವಾಹವಾಗಿದ್ದ.
ದೇವರಾಜ್​ ಮತ್ತು ಪುಟ್ಟಮ್ಮ ದಂಪತಿಗೆ 20 ವರ್ಷದ ಮಗಳು ಇದ್ದಾಳೆ. ಅನುಮಾನ ರೋಗ ಅಂಟಿಸಿಕೊಂಡಿದ್ದ ದೇವರಾಜ್​, 2ನೇ ಪತ್ನಿಗೂ ಅನೈತಿಕ ಸಂಬಂಧ ಇದೆ ಎಂದು ಜಗಳ ಮಾಡುತ್ತಿದ್ದ. ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳ ಹೆಚ್ಚಾಗಿತ್ತು. ಮಗಳು ಪವಿತ್ರಾ, ಸೋಮವಾರ ಕಾಲೇಜಿಗೆ ಹೋಗಿದ್ದಳು. ಈ ವೇಳೆ ಪತ್ನಿ ಜತೆ ಜಗಳ ತೆಗೆದಿದ್ದ. ರಾತ್ರಿ ಮನೆಯಲ್ಲೇ ಪತ್ನಿಯನ್ನು ರುಂಡ- ಮುಂಡ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದಾನೆ. ತಂದೆ ವಿರುದ್ಧ ಮಗಳು ಪವಿತ್ರಾ, ವರುಣಾ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಮದುವೆ ಆದಾಗಿನಿಂದ ತನ್ನ ತಾಯಿಗೆ ತಂದೆ ಕೊಡುತ್ತಿದ್ದ ಚಿತ್ರಹಿಂಸೆಯನ್ನ ಬಿಚ್ಚಿಟ್ಟಿದ್ದಾಳೆ. ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಏಕಾಏಕಿ ವಾಹನ ತಡೆಯಂಗಿಲ್ಲ, ಟ್ರಾಫಿಕ್​ ಪೊಲೀಸರಿಗೆ DGP ಖಡಕ್​​ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
