ಬೆಂಗಳೂರು:ವನ್ಯಜೀವಿ ಕಳೇಬರ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಕೇಸಿನಲ್ಲಿ ನಾಲ್ವರು ಆರೋಪಿಗಳನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.
ಶ್ರೀನಗರ ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನದಲ್ಲಿ ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಇದರ ಮೇರೆಗೆ ಇನ್‌ಸ್ಪೆಕ್ಟರ್ ಬಿ.ಎನ್.ಸಂದೀಪ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಸಕೋಟೆಯ ಮುನೀರ್ ಬಾಷಾ, ಬೆಂಗಳೂರಿನ ಎಂ.ಜಿ.ಶ್ರೀನಿವಾಸ್ ರಾವ್, ಮುಳಬಾಗಿಲಿನ ಸೈಯದ್ ಅಕ್ಬರ್ ಎಂಬುವರನ್ನು ಬಂಧಿಸಿದೆ. ಆರೋಪಿಗಳ ಪರಿಶೀಲನೆ ನಡೆಸಿದಾಗ ಚಿರತೆ ಚರ್ಮ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಹನುಮಂತನಗರ ಮಾರುತಿ ಸರ್ಕಲ್‌ನಲ್ಲಿ ಆನೆ ದಂತದ ಐಡಲ್ಸ್ ಮತ್ತು ಹುಲಿ ಉಗುರು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಹನುಮಂತನಗರದ ದಿನೇಶ್(47) ಎಂಬಾತನ್ನು ಬಂಧಿಸಲಾಗಿದೆ. ಈತನ ಬಳಿ ನಾಲ್ಕು ಐಡಲ್ಸ್ ಮತ್ತು ಹುಲಿ ಉಗುರು ಜಪ್ತಿ ಮಾಡಲಾಗಿದೆ.
ಇದೇ ರೀತಿ ಸುಂಕೇನಹಳ್ಳಿ ಸರ್ಕಾರಿ ಪ್ರೌಡಶಾಲೆ ಹಿಂಭಾಗ ಬೈಕ್‌ನಲ್ಲಿ ಅಪರಿಚಿತ ವ್ಯಕ್ತಿ, ಆನೆಯ ದಂತ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಸಂಗ್ರಹಿಸಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ಬ್ಯಾಗ್ ಪರಿಶೀಲನೆ ನಡೆಸಿದಾಗ ಎರಡು ಆನೆ ದಂತ ಪತ್ತೆಯಾಗಿವೆ. ಈ ಎಲ್ಲ ಆರೋಪಿಗಳ ವಿರುದ್ಧ ವನ್ಯಜೀವಿ ಕಾಯ್ದೆ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆನೇಕಲ್​ನ ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರ ಶವ ಪತ್ತೆ! ಆ ದಿನ ನಡೆದಿದ್ದೇನು?

ನಾಳೆ ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ಏಕವಚನದಲ್ಲಿ ಮಾತಾಡಿ ಎಚ್​ಡಿಕೆಯನ್ನು ಕೆಣಕಿದ ಸಚಿವರಿಗೆ ಕಾದಿದ್ಯಾ ಗಂಡಾಂತರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 9 =
Remember me
